Advertisement

ಯೋಧರ ಕುಟುಂಬಗಳ ರಕ್ಷಣೆಗೆ ಬದ್ಧ: ಅಮಿತ್‌ ಶಾ

09:59 AM Dec 30, 2019 | Team Udayavani |

ನವದೆಹಲಿ: ಕೇಂದ್ರ ಭದ್ರತಾ ಪಡೆಗಳು ಗಡಿಯಲ್ಲಿ ದೇಶವನ್ನು ರಕ್ಷಿಸುವ ಕೆಲಸದಲ್ಲಿ ನಿರತವಾಗಿರುವಾಗ ಅವರ ಕುಟುಂಬಗಳನ್ನು ನೋಡಿಕೊಳ್ಳಲು ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

Advertisement

ದೆಹಲಿಯಲ್ಲಿ ಸಿಆರ್‌ಪಿಎಫ್ನ ನೂತನ ಪ್ರಧಾನ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, “ಪ್ರತಿಯೊಬ್ಬ ಅರೆಸೇನಾ ಪಡೆಯ ಯೋಧ ಕನಿಷ್ಠ 100 ದಿನಗಳನ್ನಾದರೂ ತಮ್ಮ ಕುಟುಂಬದೊಂದಿಗೆ ಕಳೆಯಲು ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನಿಯಮ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೆ, ಅರೆಸೇನಾ ಪಡೆ ಯೋಧರ ಕುಟುಂಬಗಳಿಗೆ ಆರೋಗ್ಯ ಕಾರ್ಡ್‌ ಸೌಲಭ್ಯವನ್ನು ಒದಗಿಸಲಾಗುವುದು’ ಎಂದು ಹೇಳಿದ್ದಾರೆ.

ಲೋಧಿ ರಸ್ತೆಯಲ್ಲಿನ ಸಿಬಿಐ ಪ್ರಧಾನ ಕಚೇರಿಯ ಪಕ್ಕದಲ್ಲೇ ಸಿಆರ್‌ಪಿಎಫ್ನ ಹೊಸ ಪ್ರಧಾನ ಕಚೇರಿ ನಿರ್ಮಾಣವಾಗಲಿದೆ. 2.23 ಎಕರೆ ಪ್ರದೇಶದಲ್ಲಿ ಸುಮಾರು 277 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗುತ್ತದೆ. ಪ್ರಸ್ತುತ ಸಿಆರ್‌ಪಿಎಫ್ನ ಕಚೇರಿಯು ಲೋಧಿ ರಸ್ತೆಯ ಕೇಂದ್ರ ಸರ್ಕಾರಿ ಕಚೇರಿಗಳ ಸಂಕೀರ್ಣದಲ್ಲಿನ ಬ್ಲಾಕ್‌ ನಂ.1ರಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next