Advertisement

ಪ.ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದುರ್ಗಾ, ಸರಸ್ವತಿ ಪೂಜೆ ಪುನರಾರಂಭ : ಅಮಿತ್ ಶಾ

09:52 PM Feb 18, 2021 | Team Udayavani |

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ್ದ ಅಂಫಾನ್‌ ಚಂಡಮಾರುತದ ಸಂತ್ರಸ್ತರಿಗೆ ಕೇಂದ್ರದಿಂದ ನೀಡಲಾಗಿದ್ದ ಪರಿಹಾರ ಧನದಲ್ಲಿ ಆಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ.

Advertisement

ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆರಂಭಿಸಿರುವ “ಪರಿಬೊರ್ತನ್‌ ಯಾತ್ರಾ’ ರ್ಯಾಲಿಯ 4ನೇ ಹಂತಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಶಾ, ಅಂಫಾನ್‌ ಚಂಡಮಾರುತದ ಪರಿಹಾರ ವಿತರಣೆಯಲ್ಲಿ ಸಾಕಷ್ಟು ಅವ್ಯವಹಾರವಾಗಿರುವ ಆರೋಪ ಕೇಳಿಬಂದಿದ್ದು ಅವೆಲ್ಲವನ್ನೂ ತನಿಖೆಗೊಳಪಡಿಸಲಾಗುತ್ತದೆ. ಅದಕ್ಕಾಗಿ ವಿಶೇಷ ತನಿಖಾ ತಂಡವನ್ನು ನಿಯೋಜಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಮತಾ ಬ್ಯಾನರ್ಜಿಯವರ ಸರ್ಕಾರ, ದುರ್ಗಾ ಪೂಜೆ ಹಾಗೂ ಸರಸ್ವತಿ ಪೂಜೆಗಳನ್ನು ನಿಲ್ಲಿಸಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಆ ಪೂಜೆಗಳನ್ನು ಪುನಃ ಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ :ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ
ಅಲ್ಲದೆ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದ ಎಲ್ಲಾ ಕ್ಷೇತ್ರಗಳಲ್ಲಿ ಅಲ್ಲಿನ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

ದೀದಿ ತಿರುಗೇಟು
ಅಮಿತ್‌ ಶಾ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.
“”ನನ್ನ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿಯವರ ವಿರುದ್ಧ ಖುದ್ದು ನೀವೇ ನಿಂತು ಗೆದ್ದು ತೋರಿಸಿ. ಆಮೇಲೆ ನನ್ನನ್ನು ಎದುರಿಸುವಿರಂತೆ” ಎಂದು ಅವರು ಸವಾಲು ಹಾಕಿದ್ದಾರೆ. 24 ಪರಗಣ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, “”ನನ್ನ ಸೋದರಳಿಯ ನೇರವಾಗಿ ರಾಜ್ಯಸಭಾ ಸದಸ್ಯರಾಗಿ ಸಂಸದರಾಗಬಹುದಿತ್ತು. ಆದರೆ, ಅವರು ಜನಾದೇಶ ಪಡೆಯಲು ಮುಂದಾದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದಾರೆ. ನೀವು ಅದೇ ರೀತಿ ಅವರ ವಿರುದ್ಧವೇ ಗೆದ್ದು ತೋರಿಸಿ” ಎಂದು ಮಮತಾ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next