Advertisement

ಆಂಧ್ರದ ಚಿತ್ತೂರಿನ ಡೈರಿ ಘಟಕದಲ್ಲಿ ಅಮೋನಿಯಾ ಸೋರಿಕೆ: ಹಲವರು ಆಸ್ಪತ್ರೆಗೆ ದಾಖಲು

01:10 PM Aug 21, 2020 | keerthan |

ಚಿತ್ತೂರು ( ಆಂಧ್ರ ಪ್ರದೇಶ): ಡೈರಿ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಹಲವರು ಅಸ್ವಸ್ಥಗೊಂಡ ಘಟನೆ ಆಂಧ್ರ ಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಬಂದಪಲ್ಲಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

Advertisement

ಸುಮಾರು 15 ಮಂದಿ ಆಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 5 ಗಂಟೆಗೆ ಪುಟಾಲುಪಟ್ಟು ಬಳಿಯ ಹ್ಯಾಟ್ಸನ್ ಹಾಲು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಾದ ಘಟನೆಯ ಬಗ್ಗೆ ನಮಗೆ ಮಾಹಿತಿ ದೊರಕಿತ್ತು. ಆ ಸಮಯದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರು ಗಂಭೀರವಾಗಿ ಅಸ್ವಸ್ಥರಾಗಿದ್ದು, ಅವರನ್ನು ತಿರುಪತಿಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುವುದು ಎಂದು ಚಿತ್ತೂರು ಜಿಲ್ಲಾಧಿಕಾರಿ ನಾರಾಯಣ ಭರತ್ ಗುಪ್ತಾ ಹೇಳಿದ್ದಾರೆ.

ಸಚಿವ ಪೆಡ್ಡಿರೆಡ್ಡಿ ರಾಮಚಂದ್ರ ರೆಡ್ಡಿ ಅವರು ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇಂದು ಸ್ಥಳಕ್ಕೆ ತೆರಳಿ ಯಾವ ಕಾರಣದಿಂದ ಘಟನೆ ನಡೆದಿದೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಡಿಸಿ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next