Advertisement

ದೇವಲ್ಕುಂದದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ

10:56 PM Aug 12, 2019 | sudhir |

ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‌ಬೆಲೂ¤ರು ಗ್ರಾ.ಪಂ. ವ್ಯಾಪ್ತಿಯ ದೇವಲ್ಕುಂದದಲ್ಲಿರುವ ಮಲ್ಪೆ ಫ್ರೆಶ್‌ ಮರೈನ್‌ ಎಕ್ಸ್‌ಪೋರ್ಟ್‌ ಎನ್ನುವ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಾಗಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 75 ಕಾರ್ಮಿಕರು ಅಸ್ವಸ್ಥರಾದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದ್ದು, ತತ್‌ಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬಂದಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

Advertisement

ಬೆಳಗ್ಗೆ ಸುಮಾರು 5.30ರಿಂದ 6 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಕೂಡಲೇ ಆಸುಪಾಸಿನ ಜನ ಈ ಬಗ್ಗೆ ಕಂಡೂÉರು ಎಸ್‌ಐ ಶ್ರೀಧರ್‌ ನಾಯ್ಕ ಅವರಿಗೆ ಮಾಹಿತಿ ನೀಡಿದರು. ಅಪಾಯದ ಮುನ್ಸೂಚನೆ ಅರಿತ ಅವರು ಕೂಡಲೇ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆಗೆ ತಿಳಿಸುತ್ತಾರೆ. 6.40ರ ಸುಮಾರಿಗೆ ಘಟಕಕ್ಕೆ ಬಂದ ಎರಡು ಅಗ್ನಿ ಶಾಮಕ ವಾಹನಗಳು ಹಾಗೂ ಸಿಬಂದಿ ನಿರಂತರ 5-6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಹೆಚ್ಚಾಗಿದ್ದ ರಾಸಾಯನಿಕ ತೀವ್ರತೆಯನ್ನು ಕಡಿಮೆ ಮಾಡಿ, ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಸಂತ ಕುಮಾರ್‌, ಕುಂದಾಪುರದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಕೊರಗ ನಾಗ ಮೊಗೇರ, ಉಡುಪಿ ಠಾಣಾಧಿಕಾರಿ ಗೋಪಾಲ ಹಾಗೂ 16 ಸಿಬಂದಿಯ ತಂಡ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸಿದ್ದು, ಜಿಲ್ಲಾಧಿಕಾರಿ, ಎಸ್ಪಿ, ಎಸಿ ಸೇರಿದಂತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೀಶಾ ಜೇಮ್ಸ್‌, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್‌, ಕುಂದಾಪುರ ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌, ತಹಶೀಲ್ದಾರ್‌ ತಿಪ್ಪೆಸ್ವಾಮಿ, ತಾಲೂಕು ವೈದ್ಯಾ ಧಿಕಾರಿ ಡಾ| ನಾಗಭೂಷಣ್‌ ಉಡುಪ, ಬೈಂದೂರು ಆರೋಗ್ಯ ಕೇಂದ್ರದ ವೈದ್ಯಾ ಧಿಕಾರಿ ಡಾ| ಪ್ರೇಮಾನಂದ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಮಟ್ಟದ ಅಧಿ ಕಾರಿ ಲಕ್ಷಿ$¾àಕಾಂತ, ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀಧರ್‌ ನಾಯ್ಕ, ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌ ಭೇಟಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next