Advertisement

ಕೈ ಪ್ರಚಾರ ಸಮಿತಿಗೆ ಅಮರಿಂದರ್‌ ನೇತೃತ್ವ

12:30 AM Feb 06, 2019 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಪೂರಕವಾಗಿ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ನೇತೃತ್ವದಲ್ಲಿ ಪ್ರಚಾರ ಸಮಿತಿಯನ್ನು ಮಂಗಳವಾರ ರಚಿಸಿದ್ದಾರೆ. ಪಂಜಾಬ್‌, ಗೋವಾ, ಪುದುಚೇರಿ ಮತ್ತು ಗುಜರಾತ್‌ಗಳಿಗೆ ಸಂಬಂಧಿಸಿ ಈ ಸಮಿತಿಗಳನ್ನು ರಚಿಸಲಾಗಿದೆ. ಪಂಜಾಬ್‌ನ ವಿವಾದಾತ್ಮಕ ಸಚಿವ ನವ್‌ಜೋತ್‌ ಸಿಂಗ್‌ ಸಿಧು ಅವರಿಗೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಹೊಣೆಯನ್ನು ನೀಡಲಾಗಿಲ್ಲ. ಗುಜರಾತ್‌ನಲ್ಲಿ ಮಾಜಿ ಮುಖ್ಯಮಂತ್ರಿ ಚಿಮನ್‌ಭಾಯ್‌ ಪಟೇಲ್‌ ಪುತ್ರ ಸಿದ್ಧಾರ್ಥ್ ಪಟೇಲ್‌ರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪುದುಚೇರಿಯಲ್ಲಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರನ್ನು ಪ್ರಚಾರ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next