Advertisement

“ಅಮೃತ ಸಮುದಾಯ ಅಭಿವೃದ್ಧಿ’ಯೋಜನೆ:  ಆದೇಶ 

10:52 PM Aug 26, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾತಂತ್ರೋತ್ಸವ ಭಾಷಣದಲ್ಲಿ ತಿಳಿಸಿದ್ದ   “ಅಮೃತ ಸಮುದಾಯ ಅಭಿವೃದ್ಧಿ’ ಯೋಜನೆಗೆ ಅನುಷ್ಠಾನಕ್ಕೆ ಸರಕಾರ ಅಧಿಕೃತ  ಆದೇಶ ಹೊರಡಿಸಿದೆ.

Advertisement

ಯೋಜನೆಯಲ್ಲಿ ಎನ್ನೆಸ್ಸೆಸ್‌ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ| ನಾರಾಯಣ ಗೌಡ ಹೇಳಿದ್ದಾರೆ.

2015-16ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 30 ಲಕ್ಷ  ಕುಟುಂಬಗಳು ಬಡತನ ರೇಖೆಗಿಂತ ಕೆಳಗಿವೆ. ಈ ಪೈಕಿ 750 ಹಳ್ಳಿಗಳಲ್ಲಿ ಸುಮಾರು 1,27,369 ಕುಟುಂಬಗಳು ಅತಿ ಬಡತನದಲ್ಲಿವೆ. ಅಂತಹ ಕುಟುಂಬಗಳಿಗೆ ಸರಕಾರದ ಯೋಜನೆಗಳನ್ನು ತಲುಪಿಸಿ ಬಡತನ ರೇಖೆಗಿಂತ ಮೇಲೆತ್ತಲು ಈ ಯೋಜನೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಎನ್ನೆಸ್ಸೆಸ್‌ ಮೂಲಕ 750 ಗ್ರಾಮ ದತ್ತು :

ಗುರುತಿಸಿರುವ 750 ಗ್ರಾಮಗಳನ್ನು ಎನ್ನೆಸ್ಸೆಸ್‌ ಘಟಕಗಳ ಮೂಲಕ ದತ್ತು ಸ್ವೀಕರಿಸಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಲ್ಲಿ ತೊಡಗಿಸಿ, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಈ ಕುಟುಂಬಗಳಿಗೆ ಅಗತ್ಯವಿರುವ ಯೋಜನೆಗಳನ್ನು ನೇರವಾಗಿ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next