Advertisement

19 ಕಿ.ಮೀ. ದೂರ 8.5 ನಿಮಿಷದಲ್ಲಿ ಓಡಿಸಿ, ಆಪದ್ಭಾಂಧವನಾದ ಚಾಲಕ

01:24 AM Sep 06, 2021 | Team Udayavani |

ವಿಟ್ಲ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್‌ ಇಲ್ಲದೆ ಕೇವಲ ಇಂಡಿಕೇಟರ್‌ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್‌ ವಲಯಾಧ್ಯಕ್ಷ ವಿಕೇಶ್‌ ಶೆಟ್ಟಿ ಅವರ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.

Advertisement

ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಆ್ಯಂಬುಲೆನ್ಸ್‌ಗಾಗಿ ಸಂಬಂಧಪಟ್ಟ ವರು ಕರೆ ಮಾಡುತ್ತಿದ್ದಾಗ, ವಿಕೇಶ್‌ ಶೆಟ್ಟಿ ಅವರ ಗಮನಕ್ಕೆ ವಿಷಯ ಬಂದಿತು. ಈ ಸಂದರ್ಭ ತನ್ನ ಸ್ವಿಫ್ಟ್‌ ಕಾರನ್ನು ತೆಗೆದುಕೊಂಡು ಯುವತಿ ಹಾಗೂ ಅವರ ಸಂಬಂಧಿ ಕರನ್ನು ಕರೆದುಕೊಂಡು ರಾತ್ರಿ ಸುಮಾರು 8.30ರ ವೇಳೆಗೆ ಬುಡೋಳಿಯಿಂದ ಮಾಣಿಗೆ ಬಂದು ಅಲ್ಲಿಂದ ಪುತ್ತೂರು ಆಸ್ಪತ್ರೆಗೆ ತಲುಪಿಸಿದ್ದಾಗಿ ವಿಕೇಶ್‌ ಶೆಟ್ಟಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next