Advertisement

ಟಿಕೆಟ್‌ ತಪ್ಪಿದರೆ ಪರ್ಯಾಯ ಮಾರ್ಗ: ಅನಿಲ್‌ ಲಾಡ್‌ 

06:25 AM Dec 17, 2017 | Team Udayavani |

ಬಳ್ಳಾರಿ: ಮುಂಬರುವ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪಿದರೆ ಪರ್ಯಾಯ ಮಾರ್ಗ ಹುಡುಕಬೇಕಾಗಬಹುದು ಎಂದು ಬಳ್ಳಾರಿ ನಗರ ಶಾಸಕ ಅನಿಲ್‌ ಲಾಡ್‌ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಪಕ್ಷ ತ್ಯಜಿಸುವ ಪ್ರಶ್ನೆಯೇ ಇಲ್ಲ. ನಾನು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಂಬಿ ಕಾಂಗ್ರೆಸ್‌ ಪಕ್ಷದಲ್ಲಿದ್ದೇನೆ. ಕಾಂಗ್ರೆಸ್‌ ಪಕ್ಷದ ಕಾಣದ ಕೈಗಳೇ ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. 

Advertisement

ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಲು ನಮ್ಮ ಪಕ್ಷದವರೇ ಕಾರಣ’ ಎಂದು ಲಾಡ್‌ ವಾಗ್ಧಾಳಿ ನಡೆಸಿದರು. “ರೆಡ್ಡಿಗಳ ಆರ್ಭಟ ಇದ್ದ ಕಾಲದಲ್ಲಿ ಜಿಲ್ಲೆಯಲ್ಲಿ ಅಸ್ತಿತ್ವ ಕಳೆದುಕೊಂಡಿದ್ದ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿ ಬೆಳೆಸಿದ್ದು ನಾನು. ಜಿಲ್ಲೆಯ ಹಿರಿಯ ಕಾಂಗ್ರೆಸ್‌ ನಾಯಕರಿಗೆ ಜಿಪಂ ಸಹ ಉಳಿಸಿಕೊಳ್ಳಲು ಆಗಲಿಲ್ಲ’ ಎಂದು ಆಕ್ರೋಶ ವ್ಯಕ್ತಪಿಡಿಸಿದರು. “ನಾನು ಬಳ್ಳಾರಿಯಲ್ಲೇ ಇತೇìನೆ. ನನಗೆ ಟಿಕೆಟ್‌ ತಪ್ಪಿದರೆ ಖರ್ಗೆ ಜತೆ ಮಾತನಾಡಿ ಸೂಕ್ತ ತೀರ್ಮಾನ ಕೈಗೊಳ್ಳುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next