Advertisement

ವಾಕಿಂಗ್ ಹೋದ ವ್ಯಕ್ತಿಗೆ ಅಂಬುಲೆನ್ಸ್ ಢಿಕ್ಕಿ ; ಸಾವು..!

08:08 AM Nov 06, 2021 | Team Udayavani |

ಕಾಪು: ರಾಹೆ 66ರಲ್ಲಿ ಕಾಪುವಿನ ಕೋತಲ್ ಕಟ್ಟೆಯಲ್ಲಿ‌‌ ವಾಕಿಂಗ್ ಹೋಗಿದ್ದ ವ್ಯಕ್ತಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ.

Advertisement

ಗೋವಿಂದ ಪೂಜಾರಿಯವರು ರಸ್ತೆ ದಾಟಲು ನಿಂತಿದ್ದ ಸಮಯ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ತೀರಾ ಬಲ ಬದಿಗೆ ಬಂದು ಅವರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ:- ಯಕೃತ್ತು ಕ್ಯಾನ್ಸರ್‌ಗೆ ಗಣಿಕೆ ಸೊಪ್ಪು ರಾಮಬಾಣ!

ಅಪಘಾತದ ತೀವ್ರತೆಗೆ ಗೋವಿಂದ ಪೂಜಾರಿಯವರು ಗಾಯಗೊಂಡಿದ್ದು, ಅವರನ್ನು ತುರ್ತಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿಯ ವೈದ್ಯರು ಅವರನ್ನು ಪರೀಕ್ಷಿಸಿ ಮೃತ ಘೋಷಿಸಿದ್ದಾರೆ. ಘಟನೆಯಲ್ಲಿ ಅಂಬುಲೆನ್ಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಮತ್ತೊಂದು ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

ಘಟನೆಯಲ್ಲಿ ಚಾಲಕ ಮಣಿಯವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next