Advertisement

ನಿಷ್ಪಕ್ಷಪಾತ ತನಿಖೆಗೆ ಮುನಿರತ್ನ ಮನವಿ

12:22 PM May 15, 2018 | |

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜಾಲಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ ಒಂದರಲ್ಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

Advertisement

ಆರ್‌.ಆರ್‌.ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯನ್ನು ವಜಾ ಮಾಡುವಂತೆ ಬಿಜೆಪಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಅವರೊಂದಿಗೆ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಮುನಿರತ್ನ, “ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಪ್ರಕರಣದ ಹಿಂದೆ ಬಿಜೆಪಿ ಕೈವಾಡವಿದೆ. ಈ ಬಗ್ಗೆ ಆಯೋಗ ಸೂಕ್ತ ತನಿಖೆ ನಡೆಸಬೇಕು,’ ಎಂದು ಮನವಿ ಮಾಡಿದರು.

ಸಂಸದ ಡಿ.ಕೆ. ಸುರೇಶ್‌ ಮಾತನಾಡಿ, ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರ ಆರ್‌.ಆರ್‌.ನಗರ ಚುನಾವಣೆ ಮುಂದೂಡಿದೆ. ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯ ವಜಾ ಮಾಡುವಂತೆ ಬಿಜೆಪಿಯವರು ಆಯೋಗದ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಇರುವ ದಾಖಲೆಗಳನ್ನು ಆಯೋಗಕ್ಕೆ ನೀಡಿದ್ದೇವೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ತನಿಖೆ ನಡೆಸುವ ವಿಶ್ವಾಸವಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next