Advertisement

ಅಫ್ಘಾನ್ ನಿಂದ ಕನ್ನಡಿಗರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ: ಸಿಎಂ ಬೊಮ್ಮಾಯಿ

12:05 PM Aug 23, 2021 | Team Udayavani |

ಬೆಂಗಳೂರು: ಆಫ್ಘಾನಿಸ್ಥಾನದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಎಲ್ಲಾ ಪ್ರಯತ್ನಗನ್ನು ಮಾಡಲಾಗುತ್ತಿದೆ. ಭಾರತ ರಾಯಭಾರ ಕಚೇರಿ ಜತೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕನ್ನಡಿಗರನ್ನು ಕರೆತರಲಾಗಿದೆ. ಆ ದೇಶದಲ್ಲಿ ದೂರ ದೂರದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎನ್ನುವ ಮಾಹಿತಿ ಕಲೆಹಾಕುತ್ತಿದ್ದೇವೆ. ಆ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದರು.

ಇದನ್ನೂ ಓದಿ:ಕೊಲ್ಯ ಕನೀರುತೋಟ ನಿವಾಸಿ ಪ್ರಸಾದ್ ಆನಂದ್ ಸುರಕ್ಷಿತವಾಗಿ ಅಫ್ಗಾನಿಸ್ತಾನದಿಂದ ತವರಿಗೆ.!

ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ. ಕನ್ನಡಿಗರಿಗೆ ಪ್ರಾಣ ಹಾನಿ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಕನ್ನಡಿಗರನ್ನು ಕರೆತರಲು ನೋಡಲ್ ಅಧಿಕಾರಿ ನೇಮಿಸಿದ್ದೇವೆ ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next