Advertisement

ಶ್ರೀನಗರ: ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

08:36 AM Jul 16, 2021 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ಬಳಿಯ ಡನ್ಮಾರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಇಬ್ಬರು ಸಿಆರ್  ಪಿಎಫ್ ಯೋಧರು ಕೂಡಾ ಘಟನೆಯಲ್ಲಿ ಗಾಯಗೊಂಡಿದ್ದಾರೆ.

Advertisement

ಡನ್ಮಾರ್ ನ ಅಲಾಂದಾರ್ ಕಾಲೋನಿಯಲ್ಲಿ ಉಗ್ರರು ಅಡಗಿರುವ  ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶುಕ್ರವಾರ ಮುಂಜಾನೆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದ್ದವು. ಜಮ್ಮು ಕಾಶ್ಮೀರ ಪೊಲೀಸರು ಮತ್ತು ಸಿಆರ್ ಪಿಎಫ್ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ:ಜಮ್ಮುವಿನಲ್ಲಿ ಮತ್ತೆ ಡ್ರೋನ್ ಹಾರಾಟ: ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ ಡ್ರೋನ್ ಪತ್ತೆ

ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಇಬ್ಬರು ಸ್ಥಳೀಯರು, ಅವರಿಬ್ಬರೂ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ಕಾಶ್ಮೀರ  ಪೊಲೀಸ್ ಐಜಿ ವಿಜಯ್ ಕುಮಾರ್ ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಬುಧವಾರ ನಡೆದ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದರು. ಓರ್ವ ಭಯೋತ್ಪಾದಕನನ್ನು ಪಾಕಿಸ್ತಾನಿ ಲಷ್ಕರ್-ಎ-ತೈಬಾ ಕಮಾಂಡರ್ ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರುತಿಸಲಾಗಿದ್ದರೆ, ಉಳಿದ ಇಬ್ಬರು ಸ್ಥಳೀಯ ಅಪರಿಚಿತರಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next