Advertisement

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

11:49 PM May 08, 2024 | Team Udayavani |

ಮಂಗಳೂರು: ಎಂಜಿನಿಯರಿಂಗ್‌ ವಿದ್ಯಾರ್ಥಿ ಯೋರ್ವ ನಗರದ ಹಾಸ್ಟೆಲ್‌ವೊಂದರಲ್ಲಿ ಬುಧವಾರ ಬೆಳಗ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆೆ‌.

Advertisement

ಉಡುಪಿ ಮೂಲದವರಾಗಿದ್ದು ನಗರದ ಕಾಲೇಜೊಂದರ ಎಂಜಿನಿಯರಿಂಗ್‌ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ನಿತೇಶ್‌ ರಾವ್‌(20) ಆತ್ಮಹತ್ಯೆ ಮಾಡಿಕೊಂಡವರು. ಬೀಬಿ ಅಲಾಬಿ ರಸ್ತೆಯ ಸರಕಾರಿ ಹಾಸ್ಟೆಲ್‌ನಲ್ಲಿ ಇವರು ವಾಸವಾಗಿದ್ದರು.

ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ತಂದೆ ಸುಮಾರು 5 ವರ್ಷಗಳ ಹಿಂದೆ ಮೃತಪಟ್ಟಿದ್ದರು. ತಾಯಿ ನೀಡಿದ ದೂರಿನಂತೆ ನಗರದ ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next