Advertisement

Chikkaballapur; ಅಕ್ರಮ ರಕ್ತ ಚಂದನ ಸಾಗಿಸುತ್ತಿದ್ದ ಇನ್ನೋವಾ ಕಾರು ಪಲ್ಟಿ

11:52 AM Sep 12, 2023 | Team Udayavani |

ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ.

Advertisement

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ.

ಬೆಂಗಳೂರಿನ ಬಾಷಾ ಎಂಬುವರಿಗೆ ಮಾರಾಟ ಮಾಡಲು ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಇನ್ನೋವಾ ಕಾರಿನಲ್ಲಿ ಇರಿಸಿಕೊಂಡು ಸಾಗಾಟ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಇದನ್ನೂ ಓದಿ:Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ‌ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

Advertisement

ಸ್ಥಳಕ್ಕೆ ಪೆರೇಸಂದ್ರ ಠಾಣೆಯ ಪಿಎಸ್ಐ ಜಗದೀಶರೆಡ್ಡಿ ಹಾಗೂ ಸಿಬ್ಬಂದಿ ಭೇಟಿ‌ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next