Advertisement

ಕೋವಿಡ್‌ 19 ತಡೆಗಟ್ಟಲು ಸಂಘಟಿತ ಹೋರಾಟ ಅಗತ್ಯ

06:53 AM Jun 03, 2020 | Lakshmi GovindaRaj |

ಹಾಸನ: ಕೋವಿಡ್‌ 19 ತಡೆಗಟ್ಟುವ ಹಿನ್ನೆಲೆಯಲ್ಲಿ ಎಲ್ಲ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ , ಟಾಸ್ಕ್ ಫೋರ್ಸ್‌ ಸಮಿತಿ, ರಾಪಿಡ್‌ ರೆಸ್ಪಾನ್ಸ್‌ ಟೀಮ್‌ ಹಾಗೂ ಆಶಾ ಕಾರ್ಯಕರ್ತರು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಘಟಿತವಾಗಿ ಕಾರ್ಯನಿರ್ವಸಬೇಕು  ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಹಾಸನದ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂಬಂಧಿಸಿದಂತೆ ಹಾಕಿಕೊಂಡಿರುವ ಯೋಜನೆಗಳ  ಬಗ್ಗೆ ಪರಿಶೀಲಿಸಿ ಮಾತನಾಡಿದ ಸಚಿವರು, ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹೊರ ಸಂಪನ್ಮೂಲ ವ್ಯಕ್ತಿಗಳು, ಡಿ ಗ್ರೂಪ್‌ ಸಿಬ್ಬಂದಿ, ಹೌಸ್‌ ಕೀಪಿಂಗ್‌ ಹಾಗೂ ಸೆಕ್ಯೂರಿಟಿ ಸಿಬ್ಬಂದಿ ಕಡ್ಡಾಯವಾಗಿ ಬಯೋಮೆಟ್ರಿಕ್‌  ಹಾಜರಾತಿ ಜಾರಿ ಮಾಡಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ 19 ತಡೆಗಟ್ಟಲು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್‌ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು  ಹೆಚ್ಚಿನ ಜಾಗೃತಿ ಹಾಗೂ ಕಾಳಜಿಯಿಂದ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದಲ್ಲಿ ಬಾಕಿ ಉಳಿದಿರುವ  ಕಾಮಗಾರಿಗಳನ್ನು  ಗೂ ವೈದ್ಯಕೀಯ ಕಾಲೇಜು ಯು.ಜಿ. ಹಾಗೂ ಪಿ.ಜಿ. ವಿದ್ಯಾರ್ಥಿಗಳ ಹಾಸ್ಟೆಲ್‌ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಎಂಜಿನಿಯರ್‌ಗಳಿಗೆ ಅವರು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಆರ್‌. ಗಿರೀಶ್‌, ಜಿಲ್ಲಾ ಪೊಲೀಸ್‌  ವರಿಷ್ಠಾಧಿಕಾರಿ ಶ್ರೀನಿವಾಸ್‌ ಗೌಡ, ಉಪಭಾಗಾಧಿಕಾರಿ ಡಾ.ನವೀನ್‌ ಭಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌, ಹಿಮ್ಸ್‌ ನಿರ್ದೇಶಕ ಡಾ. ರವಿಕುಮಾರ್‌, ಜಿಲ್ಲಾ ಶಸOಉಚಿಕಿತ್ಸಕ ಡಾ. ಕೃಷ್ಣಮೂರ್ತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next