Advertisement

ವಿಟ್ಲ: ಮೂರು ವಿದ್ಯುತ್ ಕಂಬಗಳಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ

06:37 PM Jan 14, 2023 | Team Udayavani |

ವಿಟ್ಲ: ಅಪರಿಚಿತ ವಾಹನವೊಂದು ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಶನಿವಾರ ಬೆಳಗ್ಗೆ ವಿಟ್ಲ-ಮಂಗಳೂರು ರಸ್ತೆಯ ಕೆಲಿಂಜ ಪಾತ್ರತೋಟ ಎಂಬಲ್ಲಿ ಸಂಭವಿಸಿದೆ.

Advertisement

ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿದೆ.

ಕಲ್ಲು, ಮಣ್ಣು ಸಾಗಾಟ ಲಾರಿ ಆಗಿರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಇದರಿಂದ ಸುಮಾರು ಅಂದಾಜು 70 ಸಾವಿರ ರೂ.ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಪರಂಪರೆಗೆ ಸಾವಿಲ್ಲ… ಹೊಸ ಹೆದ್ದಾರಿ ಮಧ್ಯೆ ಕಾಲು ಹಾದಿಯೂ ಇರಲಿ

ಈ ಬಗ್ಗೆ ವಿಟ್ಲ ಮೆಸ್ಕಾಂ ಶಾಖಾಧಿಕಾರಿ ಸತೀಶ್ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next