Advertisement
ವಿಧಾನಪರಿಷತ್ನಲ್ಲಿ ಶುಕ್ರವಾರ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದಲ್ಲಿ ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಅನ್ನು ಕೈ ಬಿಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
Related Articles
ಸಚಿವರಾದ ಎಚ್.ಸಿ.ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ ಅವರು ನೀಡಿದ ಉತ್ತರ ವಿಪಕ್ಷದ ಸದಸ್ಯರಿಗೆ ತೃಪ್ತಿ ತರಲಿಲ್ಲ. ಸರಕಾರದ ನಿರ್ಧಾರವನ್ನು ಖಂಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ಆಗ ಆಡಳಿತ ಮತ್ತು ವಿಪಕ್ಷದ ಸದಸ್ಯರ ನಡುವೆ ಮಾತಿನ ಸಮರ ನಡೆದು ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು 10 ನಿಮಿಷಗಳ ಕಾಲ ಸದನವನ್ನು ಮುಂದೂಡಿದರು. ಮತ್ತೆ ಕಲಾಪ ಆರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದ ವಿಪಕ್ಷ ಸದಸ್ಯರು ಸರಕಾರದ ವಿರುದ್ಧ ಘೋಷಣೆ ಕೂಗಿದರು.
Advertisement
ಸೋಮವಾರ ಚರ್ಚೆಗೆ ಅವಕಾಶಸದಸ್ಯರ ಧರಣಿಯಿಂದ ಅಸಮಾಧಾನಗೊಂಡ ಸಭಾಪತಿಗಳು, ಗದ್ದಲವನ್ನು ನೋಡಿದರೆ ನನಗೆ ನೋವಾಗುತ್ತದೆ. ನಾನು ಇಲ್ಲಿ ಇರಬಾರದು. ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕೆಂದು ನೋವಿನಿಂದ ಹೇಳಿದರು. ಆದರೂ ವಿಪಕ್ಷದ ಸದಸ್ಯರು ಗಲಾಟೆ ನಿಲ್ಲಿಸಲಿಲ್ಲ. ಕೊನೆಗೆ ಅನಿವಾರ್ಯವಾಗಿ ಸಭಾಪತಿಗಳು ಮತ್ತೆ 10 ನಿಮಿಷಗಳ ಕಾಲ ಸದನ ಮುಂದೂಡಿದರು. ಕಲಾಪ ಆರಂಭವಾದಾಗ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದನ್ನು ನೋಡಿದ ಸಭಾಪತಿಗಳು ಸೋಮವಾರ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದ ಬಳಿಕ ವಿಪಕ್ಷದ ಸದಸ್ಯರು ಧರಣಿಯನ್ನು ಹಿಪಡೆದರು.