Advertisement

ರುದ್ರಭೂಮಿ ಸ್ವಚ್ಛತೆಗೆ ಮುಂದಾದ ಗುರುಸ್ವಾಮಿ

01:26 PM May 11, 2020 | Naveen |

ಆನಂದಪುರ: ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಗುರುಸ್ವಾಮಿಯೊಬ್ಬರು ತಾವರೇಹಳ್ಳಿ ಗ್ರಾಮದ ಹಿಂದೂ ರುದ್ರಭೂಮಿಯ ಸ್ವಚ್ಛತೆಗೆ ಮುಂದಾಗಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾವರೇಹಳ್ಳಿ ಗ್ರಾಮದ ಹಿಂದೂ ರುದ್ರಭೂಮಿ ನೂರಾರು ವರ್ಷಗಳಿಂದ ಭಾರೀ ಪ್ರಮಾಣದ ಗಿಡ-ಗಂಟಿ ಹಾಗೂ ಮುಳ್ಳಿನ ಗಿಡಗಳು ಬೆಳೆದು ನಿಂತಿದ್ದವು.

Advertisement

ಇಂತಹ ರುದ್ರಭೂಮಿಯನ್ನು ಸ್ವಚ್ಛ ಮಾಡಲು ಕಳೆದ 3-4 ವರ್ಷಗಳಿಂದ ಯತ್ನಿಸುತ್ತಿರುವ ಮಧುಸೂದನ್‌ ಬೆಕಲ್‌ ಅವರು ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಗುರುಸ್ವಾಮಿಗಳಾಗಿದ್ದಾರೆ. ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ಕೆ ದೃಢ ಸಂಕಲ್ಪ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 206 ರ ಸಾಗರ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯ ಮಾಡಿದ್ದು, ತದನಂತರ ತಾವರೇಹಳ್ಳಿ ಹಿಂದೂ ರುದ್ರಭೂಮಿಯ ಸ್ವಚ್ಛತೆಗೆ ಮುಂದಾಗಿದ್ದಾರೆ. ಇದರಲ್ಲಿ ಕಳೆದ ಒಂದು ತಿಂಗಳಿಂದ ಶ್ರಮದಾನದ ಮೂಲಕ ಸಣ್ಣಪುಟ್ಟ ಗಿಡಗಳನ್ನು ಕಡಿದು ಸ್ವಚ್ಛ ಮಾಡಲಾಗಿದೆ. ಇದರಿಂದ ಸಾರ್ವಜನಿಕರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅವರು ಈಗ ಇಲ್ಲಿನ ತಾವರೆಹಳ್ಳಿಯ ರುದ್ರಭೂಮಿಯ ಸ್ವಚ್ಛತೆಗೆ ಮುಂದಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಯಂತ್ರ ಬಳಸಿ ಮುಳ್ಳಿನ ಗಿಡ-ಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಛತೆಗೆ ಮುಂದಾಗಿದ್ದಾರೆ. ಅವರು ಈ ಕಾರ್ಯವನ್ನು ಗುರುತಿಸಿ ಅನೇಕ ಸಂಘ-ಸಂಸ್ಥೆಗಳು ಮಧುಸೂದನ್‌ ಬೇಕಲ್‌ ಅವರನ್ನು ಸನ್ಮಾನಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next