Advertisement

ಆಟಕ್ಕುಂಟು ಲೆಕ್ಕಕ್ಕಿಲ್ಲ, ಇದೇನು ವಿಪರ್ಯಾಸವೇ, ಕಟು ಸತ್ಯವೇ: ಬಿಜೆಪಿ ಶಾಸಕ ಮಾಮನಿ ಅಸಮಧಾನ

09:46 AM Feb 05, 2020 | keerthan |

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗಧಿಯಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಧಾನದ ಕರಿ ಛಾಯೆ ಕಾಣಿಸಲಾರಂಭಿಸಿದೆ. ಕಾಂಗ್ರೆಸ್- ಜೆಡಿಎಸ್ ನಿಂದ ಬಿಜೆಪಿ ಸೇರಿದವರಲ್ಲಿ ಕೆಲವರು ಮತ್ತು ಸ್ವಪಕ್ಷದ ಹಲವರು ಸಚಿವಗಿರಿ ವಿಷಯದಲ್ಲಿ ಅಸಮಧಾನಗೊಂಡಿದ್ದಾರೆ.

Advertisement

ಉಪಚುನಾವಣೆಯಲ್ಲಿ ಸೋತ ಬಿಜೆಪಿ ವಲಸಿಗರು, ಸಚಿವ ಸ್ಥಾನದ ಆಕಾಂಕ್ಷಿಗಳಾದ ಮೂಲ ಶಾಸಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಪರ್ಕಿಸುತ್ತಿದ್ದಾರೆ. ಈ ಮೂಲಕ ಬಿಎಸ್ ವೈ ಗೆ ಒತ್ತಡ ಹೇರುತ್ತಿದ್ದಾರೆ.

ಸವದತ್ತಿ ಬಿಜೆಪಿ ಶಾಸಕರಾದ ಆನಂದ್ ಸಿ ಮಾಮನಿ ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಗಳಲ್ಲಿ ಸ್ವಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಮನಿ, ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಬೆಲೆಯಿಲ್ಲದಾಗಿದೆ ಎಂದಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next