Advertisement

16ರಂದು ಆನಂದ ನ್ಯಾಮಗೌಡ ನಾಮಪತ್ರ

06:15 AM Oct 11, 2018 | Team Udayavani |

ಬಾಗಲಕೋಟೆ: ಜಮಖಂಡಿ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಅ.16ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಜಮಖಂಡಿ ನಗರದ ಹಳೆಯ ತಹಶೀಲ್ದಾರ್‌ ಕಚೇರಿಯಿಂದ ಬೃಹತ್‌ ಮೆರಣಿಗೆ ನಡೆಸಿದ ಬಳಿಕ ಮಿನಿ ವಿಧಾನಸೌಧದಲ್ಲಿ ಉಪವಿಭಾಗಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. 

Advertisement

ಮಾಜಿ ಸಿಎಂ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಸಹಿತ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ಕಾಂಗ್ರೆಸ್‌
ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಆನಂದ ನ್ಯಾಮಗೌಡ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next