Advertisement

ಆನಂದರಿಂದ ಬ್ರಾಹ್ಮಣರ ಅವಹೇಳನ: ಆಕ್ರೋಶ

06:20 AM Nov 15, 2018 | |

ಬಾಗಲಕೋಟೆ: ಜಮಖಂಡಿ ಉಪಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿರುವ ಆನಂದ ನ್ಯಾಮಗೌಡ ಅವರು ಗೆದ್ದ ಒಂದೇ ವಾರದಲ್ಲಿ ಬ್ರಾಹ್ಮಣ ಸಮಾಜದ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

Advertisement

ಶಾಸಕರಾಗಿ ಆಯ್ಕೆಯಾದ ಬಳಿಕ ಜಮಖಂಡಿಯ ಮುಸ್ಲಿಂ ಬಾಂಧವರು ಹಮ್ಮಿಕೊಂಡಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ
1990ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಅವರು ಲೋಕಸಭೆ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ರಾಷ್ಟ್ರದ ಗಮನ ಸೆಳೆದಿದ್ದರು.

ರಾಮಕೃಷ್ಣ ಹೆಗಡೆ ಅವರೂ ಬ್ರಾಹ್ಮಣರು. ಈಗ ನಾನು 40 ಸಾವಿರ ಮತಗಳ ಲೀಡ್‌ನಿಂದ ಗೆದ್ದಿದ್ದು, ನಾನೂ ಬ್ರಾಹ್ಮಣರನ್ನು ಸೋಲಿಸಿದ್ದೇನೆ ಎಂದು ಹೇಳಿ, ಚಪ್ಪಾಳೆ ಗಿಟ್ಟಿಸಿಕೊಂಡಿರುವ ವಿಡಿಯೋ ವೈರಲ್‌ ಆಗಿದೆ. ಇದರಿಂದ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next