Advertisement

ಆನಂದ್‌ ಸಿಂಗ್‌-ಗಣೇಶ್‌ ಭೇಟಿ?

11:17 PM Apr 27, 2019 | Lakshmi GovindaRaj |

ಹೊಸಪೇಟೆ: ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಅವರು ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಶಾಸಕ ಆನಂದ್‌ಸಿಂಗ್‌ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

Advertisement

ಶಾಸಕ ಆನಂದ ಸಿಂಗ್‌ ಅವರ ತಂದೆ ಪೃಥ್ವಿರಾಜ್‌ ಸಿಂಗ್‌ ಅವರ ಕಾಲು ಮುಟ್ಟಿ ನಮಸ್ಕರಿಸಿ, “ನನ್ನಿಂದ ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ’ ಎಂದು ಕೇಳಿಕೊಂಡಿದ್ದಾರೆ.

ಕಮಲಾಪುರ ಮೂಲದ ಆನಂದ್‌ ಸಿಂಗ್‌ ಪರಮಾಪ್ತ ಸಮೀವುಲ್ಲಾ ಮಧ್ಯಸ್ಥಿಕೆಯಿಂದಾಗಿ ಆನಂದ್‌ ಸಿಂಗ್‌-ಗಣೇಶ್‌ ನಡುವೆ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಹಿಂದೆ, ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿದರು ಎಂಬ ಆರೋಪದ ಹಿನ್ನೆಲೆಯಲ್ಲಿ ಕಂಪ್ಲಿ ಗಣೇಶ್‌ ಬಂಧನಕ್ಕೆ ಒಳಗಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next