Advertisement

ನನಗೂ ಸಚಿವ ಸ್ಥಾನ ಕೊಡಿ ಎಂದು ತಗಾದೆ ತೆಗೆದ ಶಾಸಕ ಮಾಮನಿ

09:59 AM Feb 03, 2020 | sudhir |

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಮೀಪಿಸುತ್ತಿದ್ದಂತೆ ಸವದತ್ತಿಯ ಬಿಜೆಪಿ ಶಾಸಕ ಆನಂದ ಮಾಮನಿ ಅವರು ತಮಗೂ ಸಚಿವ ಸಂಪುಟದಲ್ಲಿ ಸೇರಿಸುವಂತೆ ತಗಾದೆ ತೆಗೆದಿದ್ದು, ಮೂರು ಬಾರಿ ಶಾಸಕನಾಗಿರುವ ನನ್ನನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

ರವಿವಾರ ‘ಉದಯವಾಣಿ’ಯೊಂದಿಗೆ ಮಾತನಾಡಿದ ಆನಂದ ಮಾಮನಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿದ್ದ 17 ಜನ ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಚಿವ ಸ್ಥಾನ ನೀಡುವುದರಲ್ಲಿ ನನ್ನ ತಕರಾರು ಇಲ್ಲ. ಅವರೆಲ್ಲರಿಗೂ ಸಚಿವ ಸ್ಥಾನ ಕೊಡುವುದನ್ನು ನಾನು ಸ್ವಾಗತಿಸುತ್ತೇನೆ. ಅವರೊಂದಿಗೆ ನನಗೂ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಡೆಪ್ಯುಟಿ ಸ್ಪೀಕರ್ ಅಥವಾ ದೆಹಲಿ ವಿಶೇಷ ಪ್ರತಿನಿಧಿಯಾಗಿ ನಿಯೋಜಿಸುವಂತೆ ಮಾಮನಿ ಒತ್ತಾಯಿಸಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಶಾಸಕ ಮಾಮನಿ, ನನಗೆ ಸಚಿವನಾಗಬೇಕೆಂಬ ಆಸೆ ಇಲ್ಲ. ಸಚಿವ ಸ್ಥಾನ ಕೊಡಿ ಎಂದು ಯಾರ ಮೇಲೆ ಒತ್ತಡವೂ ಹಾಕುವುದಿಲ್ಲ. ಶಾಸಕನಾಗಿಯೇ ಇದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮ ವಹಿಸಿ ದುಡಿಯುತ್ತೇನೆ ಎಂದು ಹೇಳಿದ್ದರು. ಈಗ ದಿಢೀರ್ ಮಾಮನಿ ಅವರು ಸಚಿವ ಸ್ಥಾನದ ಕುರಿತು ತಗಾದೆ ತೆಗೆದಿದ್ದು ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next