Advertisement

Anandapura; ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇನ್ನೋರ್ವ ಗಂಭೀರ

09:24 PM Feb 26, 2024 | Team Udayavani |

ಶಿವಮೊಗ್ಗ : ಸಾಗರದ ಆನಂದಪುರದ ಗೌತಮಪುರ ಬಳಿ ಸೋಮವಾರ ಸಂಜೆ ಕಾರು ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಅವಘಡ ನಡೆದಿದೆ.

Advertisement

ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್ ಸವಾರ ಪ್ರತಾಪ್ (26) ನ ಎರಡು ಕಾಲುಗಳು ತುಂಡಾಗಿವೆ ಎಂದು ವರದಿಯಾಗಿದೆ.ತೀವ್ರ ಗಾಯಗೊಂಡ ಪ್ರತಾಪ್ ಸ್ಥಿತಿ ಗಂಭೀರವಾಗಿದೆ.

ಕಾರು ಆನಂದಪುರದಿಂದ ಶಿಕಾರಿಪುರ ಕಡೆಗೆ ಸಾಗುತ್ತಿದ್ದು, ಬೈಕ್ ನಲ್ಲಿ ಸ್ನೇಹಿತರು ಶಿಕಾರಿಪುರದಿಂದ ಆನಂದಪುರದೆಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರರು ಆನಂದಪುರದ ಸಂತೆ ಮೈದಾನ ಬಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next