Advertisement

ಆಶಾ ಕಾರ್ಯಕರ್ತೆಯರಿಗೆ ಕಿಟ್‌ ವಿತರಣೆ

05:59 PM Apr 25, 2020 | Naveen |

ಆನಂದಪುರ: ಕೋವಿಡ್ ವೈರಸ್‌ ಬಗ್ಗೆ ಮಾಹಿತಿಯೊಂದಿಗೆ ಜಾಗೃತಿ ಮೂಡಿಸುವಲ್ಲಿ ನಮ್ಮ ರಾಜ್ಯದ ಆಶಾ ಕಾರ್ಯಕರ್ತೆಯರ ಸೇವೆ ಅಮೋಘವಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಬಿ.ಆರ್‌. ಜಯಂತ್‌ ನುಡಿದರು.

Advertisement

ಸ್ಥಳೀಯ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಆನಂದಪುರ, ಆಚಾಪುರ, ಯಡೇಹಳ್ಳಿ, ಹೊಸೂರು, ಗೌತಮಪುರ ಗ್ರಾಪಂ ವ್ಯಾಪ್ತಿಯ ಸುಮಾರು 28 ಆಶಾ ಕಾರ್ಯಕರ್ತೆಯರಿಗೆ ಪಡಿತರ ಕಿಟ್‌ ವಿತರಿಸಿ ಅವರು ಮಾತನಾಡಿದರು. ಸರ್ಕಾರ ಆಶಾ ಕಾರ್ಯಕರ್ತೆಯರು ಮಾಡುತ್ತಿರುವ ಕಾರ್ಯವನ್ನು ಅರಿತು ಹೆಚ್ಚಿನ ಸಂಬಳ ನೀಡಬೇಕು ಎಂದರು.

ಜಿಪಂ ಮಾಜಿ ಸದಸ್ಯ ರತ್ನಾಕರ್‌ ಹೊನಗೋಡು, ತಾಪಂ ಸದಸ್ಯೆ ಜ್ಯೋತಿ ಕೋವಿ, ಆನಂದಪುರ ಎಪಿಎಂಸಿ ಸದಸ್ಯರಾದ ಭರ್ಮಪ್ಪ, ಗ್ರಾಪಂ ಸದಸ್ಯ ಮೋಹನ್‌ಕುಮಾರ್‌ ಕಾಲೋನಿ, ಪಕ್ಷದ ಮುಖಂಡರಾದ ಪ್ರಕಾಶ್‌ ನಾಯಕ್‌, ಕೆರಿಯಮ್ಮ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next