Advertisement

ಅನಂತಕುಮಾರ್ ಅಂತಿಮ ದರ್ಶನಕ್ಕಾಗಿ ಕೇಂದ್ರ ಸಚಿವರ ದಂಡು

09:57 AM Nov 12, 2018 | Sharanya Alva |

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್.ಅನಂತಕುಮಾರ್ (59) ಅವರು ಸೋಮವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜೂಭಾಯ್ ವಾಲಾ ಸೇರಿದಂತೆ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

Advertisement

ಇನ್ಫೋಸಿಸ್ ನ ಸುಧಾಮೂರ್ತಿ ಅವರು ಅನಂತ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ವೇಳೆ ಕಣ್ಣೀರಿಟ್ಟ ಪ್ರಸಂಗ ನಡೆಯಿತು. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್, ಸಂಸದ ಪ್ರಹ್ಲಾದ ಜೋಶಿ, ನಟಿ, ಬಿಜೆಪಿ ನಾಯಕಿ ತಾರಾ, ಸುರೇಶ್ ಕುಮಾರ್, ಆರ್.ಅಶೋಕ್, ವಿ.ಸೋಮಣ್ಣ, ಸಿಟಿ ರವಿ ಅನಂತಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕೇಂದ್ರ ಸಚಿವರ ಆಗಮನ :

ಎಲ್ ಕೆ ಅಡ್ವಾಣಿ, ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಸೇರಿದಂತೆ ಕೇಂದ್ರದ ಹಲವು ಸಚಿವರು ಬೆಂಗಳೂರಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ. ಇಂದು ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಸುತ್ತೂರು ಶ್ರೀ, ಖರ್ಗೆ, ಸಿದ್ದರಾಮಯ್ಯ ಸಂತಾಪ:

Advertisement

ಅನಂತ ಕುಮಾರ್ ಅವರ ನಿಧನಕ್ಕೆ ಸುತ್ತೂರು ಶ್ರೀಗಳು, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next