Advertisement

ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು 

06:45 PM Jul 25, 2023 | Team Udayavani |

ವಿಟ್ಲ: ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆಯಾಗಿದ್ದು, ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಅಧ್ಯಕ್ಷ ಗಣೇಶ್ ಪೂಜಾರಿ(60) ಅವರು ರಸ್ತೆ ಬದಿಯ ಚರಂಡಿಯ ಶುಚೀಕರಣ ಮಾಡುತ್ತಿದ್ದಾಗ ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತತ್ ಕ್ಷಣ ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಶಾಂತಿ ಕದಡುವ ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಡೆಯಬೇಕೆಂದು ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next