Advertisement

ಅನಂತಕುಮಾರ್‌ ಹೆಗಡೆ ವಿರುದ್ಧ ಪುಟಗೋಸಿ ಚಳವಳಿ

06:05 AM Jun 06, 2018 | Team Udayavani |

ಮಂಡ್ಯ: ಜಾತ್ಯತೀತ ಜನತಾದಳ ಪಕ್ಷವನ್ನು ಪುಟಗೋಸಿ ಪಕ್ಷವೆಂದು ಲಘುವಾಗಿ ಟೀಕಿಸಿದ್ದ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ವಿರುದ್ಧ ಯುವ ಜೆಡಿಎಸ್‌ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪುಟಗೋಸಿ ಚಳವಳಿ ನಡೆಸಿದರು.

Advertisement

ನಗರದ ಪ್ರಧಾನ ಅಂಚೆ ಕಚೇರಿ ಎದುರು ಜಮಾಯಿಸಿದ ಯುವ ಜೆಡಿಎಸ್‌ ಕಾರ್ಯಕರ್ತರು, ಪುಟಗೋಸಿಗಳನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶಿಸಿದರಲ್ಲದೆ, ಅವುಗಳನ್ನು ಅಂಚೆ ಮೂಲಕ ಅನಂತ ಕುಮಾರ್‌ ಹೆಗಡೆಅವರಿಗೆ ರವಾನಿಸಿದರು.

ವ್ಯಾಪಕ ಟೀಕೆ: ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವ ಮುಖಂಡ ಗೋಪಾಲಪುರ ಶ್ರೀನಿವಾಸ್‌ ಮಾತನಾಡಿ, ಅನಂತ ಕುಮಾರ್‌ ಹೆಗಡೆ ಅವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಪದೇಪದೆ ನಾಲಿಗೆಯನ್ನು ಹರಿಯಬಿಡುತ್ತಲೇ ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈಗಾಗಲೇ ಸಂವಿಧಾನವನ್ನೇ
ಬದಲಾವಣೆ ಮಾಡುತ್ತೇನೆಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಅವರ ಈ ಮಾತಿಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು ಎಂದು ಹೇಳಿದರು.

ಬುದ್ಧಿ ಹೇಳುವವರಿಲ್ಲ: ಸಂವಿಧಾನ ವಿರೋಧಿ ಹೇಳಿಕೆಯಿಂದಲೇ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಇಷ್ಟಾದರೂ ಬಿಜೆಪಿ ವರಿಷ್ಠರಿಗೆ ಹಾಗೂ ಅನಂತ ಕುಮಾರ್‌ ಹೆಗಡೆ ಅವರಿಗೆ ಬುದ್ಧಿ ಬಂದಿಲ್ಲ. ನಾಲಿಗೆ ಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದನ್ನು ಕಲಿತಿಲ್ಲ.

ಈ ವಿಚಾರವಾಗಿ ಬುದ್ಧಿ ಹೇಳುವವರೂ ಇಲ್ಲ ಎಂದು ಟೀಕಿಸಿದರು.ಪ್ರಾದೇಶಿಕ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿರುವ ಸಚಿವ ಅನಂತ ಕುಮಾರ್‌ ಹೆಗಡೆ ತಕ್ಷಣ ಕ್ಷಮೆಯಾಚಿಸುವಂತೆ ಆಗ್ರಹಿಸಿದ ಅವರು, ಒಮ್ಮೆ ಅವರು ಕ್ಷಮೆಯಾಚಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಚಳವಳಿ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next