Advertisement

ಸಂವಿಧಾನ ಬದಲು ಹೇಳಿಕೆ; ಲೋಕಸಭೇಲಿ ಕ್ಷಮೆಯಾಚಿಸಿದ ಸಚಿವ ಹೆಗಡೆ

11:31 AM Dec 28, 2017 | Team Udayavani |

ನವದೆಹಲಿ:ಸಂವಿಧಾನ ಕುರಿತ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಏತನ್ಮಧ್ಯೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಸೂಚನೆ ಮೇರೆಗೆ ಸಚಿವ ಹೆಗಡೆ ಗುರುವಾರ ಲೋಕಸಭೆಯಲ್ಲಿ ಕ್ಷಮೆಯಾಚಿಸುವ ಮೂಲಕ ವಿವಾದ ತಣ್ಣಗಾಗಿಸಲು ಯತ್ನಿಸಿದ್ದಾರೆ.

Advertisement

ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತ್ತು, ಬಳಿಕ ಕಾಂಗ್ರೆಸ್ ಸಂಸದರು ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ರಾಜೀನಾಮೆ ಇಲ್ಲವೇ ಕ್ಷಮೆಯಾಚಿಸಬೇಕೆಂದು ಪಟ್ಟುಹಿಡಿದು ಪ್ರತಿಭಟನೆ ನಡೆಸಿದ್ದವು.

ಬುಧವಾರ ಸಂಸತ್ ನ ಉಭಯ ಸದನಗಳಲ್ಲೂ ಹೆಗಡೆ ವಿವಾದಾತ್ಮಕ ಹೇಳಿಕೆ ಪ್ರತಿಧ್ವನಿಸಿದ್ದಲ್ಲದೇ, ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಆದರೂ ಕ್ಷಮೆಯಾಚಿಸಲು ನನಗೆ ಯಾವುದೇ ಅಭ್ಯಂತರ ಇಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next