Advertisement

Anantnag Encounter; ಮೂವರು ಯೋಧರು ಹುತಾತ್ಮರಾಧ ಬೆನ್ನಲ್ಲೇ ಮತ್ತೋರ್ವ ನಾಪತ್ತೆ!

12:18 PM Sep 15, 2023 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ 48 ಗಂಟೆಗಳಿಂದ ನಡೆಯುತ್ತಿರುವ ಭಯೋತ್ಪಾದಕರ ಎನ್‌ ಕೌಂಟರ್‌ ನಲ್ಲಿ ಯೋಧನೊಬ್ಬ ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಕೋಕರ್‌ ನಾಗ್‌ ನ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರನ್ನು ಬೇಟೆಯಾಡಲು ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಬುಧವಾರದಿಂದ ಈ ಗುಂಡಿನ ಚಕಮಕಿ ನಡೆಯುತ್ತಿದೆ.

ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಸೇನೆಯ ಇಬ್ಬರು ಮತ್ತು ಒಬ್ಬ ಪೊಲೀಸ್ ಸೇರಿದಂತೆ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದರು. ಭಯೋತ್ಪಾದಕರ ಕಡೆಯಿಂದ ಗಾಯಗೊಂಡಿರುವ ಅಂಕಿಅಂಶಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಇದನ್ನೂ ಓದಿ:Asia Cup; ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆ ಸಾಧ್ಯತೆ

ಭದ್ರತಾ ಪಡೆಗಳು ತಮ್ಮ ತೀವ್ರವಾದ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳಲ್ಲಿ ಸ್ಟ್ರೈಕ್-ಸಾಮರ್ಥ್ಯ ಹೆರಾನ್ ಡ್ರೋನ್‌ಗಳು ಸೇರಿದಂತೆ ಹೊಸ ತಲೆಮಾರಿನ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಬಳಸುತ್ತಿವೆ.

Advertisement

19 ರಾಷ್ಟ್ರೀಯ ರೈಫಲ್ಸ್ ಘಟಕದ (19 RR) ಕಮಾಂಡಿಂಗ್ ಆಫೀಸರ್ ಕರ್ನಲ್ ಮನ್‌ಪ್ರೀತ್ ಸಿಂಗ್, ಮತ್ತು 19 ಆರ್ ಆರ್ ನ ಕಂಪನಿಯ ಕಮಾಂಡರ್ ಮೇಜರ್ ಆಶಿಶ್ ಧೋಂಚಕ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನಲ್ಲಿ ಡೆಪ್ಯುಟಿ ಸೂಪರಿಂಟೆಂಡೆಂಟ್ (ಡಿವೈಎಸ್‌ಪಿ) ಹಿಮನ್ಯುನ್ ಮುಜಾಮಿಲ್ ಭಟ್ ಅವರು ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next