Advertisement

Bejjavalli ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಅಂದರ್ ಬಾಹರ್!

06:28 PM Jan 14, 2024 | Team Udayavani |

ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಅದ್ದೂರಿ ಜಾತ್ರೆ ನಡೆಯುತ್ತಿದೆ. ನೂರಾರು ಕಡೆಗಳಿಂದ ಈ ಜಾತ್ರೆಗೆ ಸಾವಿರಾರು ಮಂದಿ ಬಂದಿದ್ದಾರೆ.

Advertisement

ಆದರೆ ಜಾತ್ರೆಯಲ್ಲಿ ಇಸ್ಪೀಟ್ ಅಂದರ್ ಬಾಹರ್ ಶುರುವಾಗಿದ್ದು ಜನರನ್ನು ಆಡಿಸುವ ಮೂಲಕ ಅಲ್ಪ ಸ್ವಲ್ಪ ಹಣವನ್ನು ಖಾಲಿ ಮಾಡಿಸಿ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಬೆಜ್ಜವಳ್ಳಿ ಜಾತ್ರೆಯಲ್ಲಿ ಕೆಲವು ವ್ಯಕ್ತಿಗಳು ಇಸ್ಪೀಟ್ ಆಟವನ್ನು ಬಹಿರಂಗವಾಗಿಯೇ ಆಡಿಸಿದ್ದಾರೆ.

ದೇವಸ್ಥಾನದ ಸಮೀಪವೇ ಅಕ್ರಮವಾಗಿ ಇಸ್ಪೀಟ್ ಆಟ ನಡೆದಿದ್ದು ಅಚ್ಚರಿ ಮೂಡಿಸಿದೆ. ಹಾಗೆಯೇ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ಮಾಳೂರು ಪೊಲೀಸರು ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next