Advertisement
ಭುವನೇಶ್ವರದಿಂದ ಬರುತ್ತಿದ್ದ ಈ ನತದೃಷ್ಟ ಬಸ್ಸಿನಲ್ಲಿ 38 ಪ್ರಯಾಣಿಕರಿದ್ದರು. ವಿಶಾಖಪಟ್ಟಣದಲ್ಲಿ ಸ್ವಲ್ಪ ಹೊತ್ತು ನಿಂತು ಈ ಬಸ್ಸು ಅನಂತರ ತನ್ನ ಪ್ರಯಾಣವನ್ನು ಮುಂದುವರಿಸಿತ್ತು.
Related Articles
Advertisement
ಉಪ ಮುಖ್ಯಮಂತ್ರಿ (ಗೃಹ) ಎನ್ ಚಿನ್ನ ರಾಜಪ್ಪ ಅವರು ತ್ವರಿತ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಕೃಷ್ಣಾ ಜಿಲ್ಲೆಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಬಸ್ಸಿನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ವಿಶಾಖಪಟ್ಟಣ, ಭುವನೇಶ್ವರ, ಶ್ರೀಕಾಕುಳಂ ಮತ್ತು ಹೈದರಾಬಾದಿನವರಾಗಿದ್ದಾರೆ. ತೆಲುಗು ದೇಶಂ ಪಕ್ಷದ ಅನಂತಪುರ ಸಂಸದ ಜೆ ಸಿ ದಿವಾಕರ ರೆಡ್ಡಿ ಒಡೆತನದ ದಿವಾಕರ ಟ್ರಾವೆಲ್ ಏಜನ್ಸಿಯ ಬಸ್ಸು ಭೀಕರ ಅಪಘಾತಕ್ಕೆ ಗುರಿಯಾಗಿರುವ ಎರಡನೇ ಪ್ರಕರಣ ಇದಾಗಿದೆ.
2013ರ ಅಕ್ಟೋಬರ್ನಲ್ಲಿ ಜಬ್ಟಾರ್ ಟ್ರಾವೆಲ್ಸ್ ಸಂಸ್ಥೆಯಿಂದ ಲೀಸಿಗೆ ಪಡೆಯಲಾಗಿದ್ದ ದಿವಾಕರ್ ಟ್ರಾವೆಲ್ಸ್ ಸಂಸ್ಥೆಯ ಮಲ್ಟಿ ಆ್ಯಕ್ಸೆಲ್ ವೋಲ್ವೋ ಬಸ್ಸು ಬೆಂಗಳೂರಿನಿಂದ ಹೈದರಾಬಾದಿಗೆ ಬರುತ್ತಿದ್ದಾಗ ಮೆಹಬೂಬ್ನಗರ ಜಿಲ್ಲೆಯ ಕೋಥಕೋಟ ಎಂಬಲ್ಲಿ ಬೆಂಕಿಗೆ ಆಹುತಿಯಾದ ದುರ್ಘಟನೆಯಲ್ಲಿ 45 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.