Advertisement

Politics: ಪ್ರಧಾನಿ ಮೋದಿ, ನಿರ್ಮಲಾ ಜತೆಗೆ ಆಂಧ್ರ ಸಿಎಂ ಜಗನ್‌ ಮಾತುಕತೆ

11:46 PM Feb 09, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ, ರಾಜ್ಯಕ್ಕೆ ವಿಶೇಷ ಸ್ಥಾನ ಮಾನ ನೀಡುವಂತೆ ಮನವಿ ಮಾಡಿದರು. ಇದರ ಜತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆಗೂ ಅವರು ಭೇಟಿ ಯಾಗಿ ಮಾತುಕತೆ ನಡೆಸಿದ್ದಾರೆ.

Advertisement

ಮಾಜಿ ಸಿಎಂ, ಟಿಡಿಪಿ ಅಧ್ಯಕ್ಷ ಎನ್‌.ಚಂದ್ರಬಾಬು ನಾಯ್ಡು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದಿದೆ. ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್‌ ತಳಮಟ್ಟದಿಂದ ಸಂಘಟನೆಯನ್ನು ಬಲಗೊಳಿಸುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಟಿಡಿಪಿ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜಗನ್‌ಮೋಹನ್‌ ರೆಡ್ಡಿ ದೆಹಲಿಗೆ ಧಾವಿಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next