Advertisement

Mahesh Babu ಚಿತ್ರದ ಕಾರ್ಯಕ್ರಮದ ವೇಳೆ ಕಾಲ್ತುಳಿತ… ಪೊಲೀಸ್ ಅಧಿಕಾರಿಯ ಕಾಲು ಮುರಿತ

03:38 PM Jan 10, 2024 | Team Udayavani |

ಆಂಧ್ರಪ್ರದೇಶ: ಮಹೇಶ್ ಬಾಬು ಅಭಿನಯದ ತೆಲುಗು ಚಿತ್ರ ‘ಗುಂಟೂರು ಕಾರಮ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮಕ್ಕೆ ಧಾವಿಸಿದ ಪರಿಣಾಮ ಉಂಟಾದ ನೂಕುನುಗ್ಗಲಿನಿಂದ ಪೊಲೀಸ್ ಅಧಿಕಾರಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

Advertisement

ಮಂಗಳವಾರ ಆಂಧ್ರಪ್ರದೇಶದ ಗುಂಟೂರಿನ ನಂಬೂರು ಕ್ರಾಸ್ ರೋಡ್‌ನಲ್ಲಿರುವ ನಡೆದ ಸಮಾರಂಭಕ್ಕೆ ಅಭಿಮಾನಿಗಳೂ ಸೇರಿದಂತೆ ಅಪಾರ ಜನಸ್ತೋಮವೇ ಹರಿದು ಬಂದಿದೆ ಈ ವೇಳೆ ನೂಕುನುಗ್ಗಲು ನಡೆದು ಹಲವರು ಗಾಯಗೊಂಡಿದ್ದು ಇದೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಕಾಲು ಮುರಿತಕ್ಕೊಳಗಾಗಿದೆ ಎನ್ನಲಾಗಿದೆ, ಪರಿಸ್ಥಿತಿ ಕೈಮೀರಿದ ಪರಿಣಾಮ ಕಾರ್ಯಕ್ರಮ ಅಸ್ತವ್ಯಸ್ತಗೊಂಡಿತು. ಗಂಭೀರ ಗಾಯಗೊಂಡ ಪೊಲೀಸ್ ಅಧಿಕಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ‘ಗುಂಟೂರು ಕಾರಮ್’ ಚಿತ್ರ ಪಕ್ಕಾ ಕಮರ್ಷಿಯಲ್ ಆಗಿದ್ದು ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಮಂಗಳವಾರ ನಡೆಸಲಾಯಿತು ಈ ವೇಳೆ ಕಾಲ್ತುಳಿತ ಉಂಟಾಗಿದೆ.

ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ‘ಗುಂಟೂರು ಕಾರಮ್’ ಚಿತ್ರಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಿದ್ದು ಈ ಚಿತ್ರವನ್ನು ಹರಿಕಾ ಹಾಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರಾಧಾಕೃಷ್ಣ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ನಾಯಕಿಯಾರಾಗಿದ್ದರೆ. ಪ್ರಕಾಶ್ ರಾಜ್, ಜಗಪತಿ ಬಾಬು, ಜಯರಾಮ್ ಸೇರಿದಂತೆ ಹಲವರು ಇದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರಕ್ಕೆ ಥಮನ್ ಸಂಗೀತ ಸಂಯೋಜಿಸಿದ್ದಾರೆ.

ಇದನ್ನೂ ಓದಿ: ಭಾರತ $35 ಟ್ರಿಲಿಯನ್ ಆರ್ಥಿಕತೆಯಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ: ಮುಕೇಶ್ ಅಂಬಾನಿ

Advertisement
Advertisement

Udayavani is now on Telegram. Click here to join our channel and stay updated with the latest news.

Next