Advertisement

ನಾಲಿಗೆ ಕತ್ತರಿಸುವ ಬೆದರಿಕೆ

06:00 AM Sep 23, 2018 | Team Udayavani |

ಹೈದರಾಬಾದ್‌: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇನೆ ಎಂದು ಸಂಸದ ಜೆ.ಸಿ.ದಿವಾಕರ ರೆಡ್ಡಿ ವಿರುದ್ಧ ಆಂಧ್ರಪ್ರದೇಶದ ಕದಿರಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಾಧವ್‌ ಗುಡುಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ರೆಡ್ಡಿ, ನಾಲಿಗೆ ಕತ್ತರಿಸಿಕೊಳ್ಳಲು ಎಲ್ಲಿ ಬರಬೇಕು ಹೇಳಿ, ಬರುತ್ತೇನೆ ಎಂದಿದ್ದಾರೆ. ಅಲ್ಲದೆ ಇನ್‌ಸ್ಪೆಕ್ಟರ್‌ ವಿರುದ್ಧª ತಡಿಪಟ್ರಿ ಪೊಲೀಸ್‌ ಠಾಣೆಯಲ್ಲಿ ದೂರು ಕೂಡ ನೀಡಿದ್ದಾರೆ. ಇತ್ತೀಚೆಗೆ ನಡೆದ ಗುಂಪು ಘರ್ಷಣೆ ವೇಳೆ ಪೊಲೀಸರು ಹೇಡಿಗಳಂತೆ ಓಡಿಹೋಗಿದ್ದಾರೆ ಎಂದು ಸಂಸದ ರೆಡ್ಡಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇನ್‌ಸ್ಪೆಕ್ಟರ್‌ ಮಾಧವ್‌, ಯಾವುದೇ ಹಾಲಿ, ಮಾಜಿ ಸಂಸದರು, ಶಾಸಕರು ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ನಾಲಿಗೆ ಸೀಳುತ್ತೇನೆ. ನಮ್ಮ ಸಹನೆಗೂ ಮಿತಿಯಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next