Advertisement

Tomato ಬೆಳೆಗೆ ಕಾವಲು ಕಾಯುತ್ತಿದ್ದ ರೈತನ ಕೊಂದ ದುಷ್ಕರ್ಮಿಗಳು

06:28 PM Jul 18, 2023 | Team Udayavani |

ವಿಶಾಖಪಟ್ಟಣ: ಟೊಮೆಟೊ ಬೆಳೆಗೆ ಕಾವಲು ಕಾಯುತ್ತಿದ್ದ ವೇಳೆ ನಿದ್ದೆಗೆ ಜಾರಿದ ರೈತನ ಕತ್ತು ಹಿಸುಕಿ ಅಪರಿಚಿತರು ಕೊಂದ ಘಟನೆ ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಏಳು ದಿನಗಳಲ್ಲಿ ಈ ಪ್ರದೇಶದಲ್ಲಿ ವರದಿಯಾದ ಎರಡನೇ ಸಾವು ಇದು.

Advertisement

ಮೂಲಗಳ ಪ್ರಕಾರ, ಭಾನುವಾರ ಮಧ್ಯರಾತ್ರಿ ಅನ್ನಮಯ ಜಿಲ್ಲೆಯ ಪೆದ್ದ ತಿಪ್ಪ ಸಮುದ್ರದ ಬಳಿ ಬೆಳೆ ಕಾವಲು ಜಮೀನಿನಲ್ಲಿ ಮಲಗಿದ್ದ ರೈತ ಮಧುಕರ್ ರೆಡ್ಡಿ ಅವರನ್ನು ದುಷ್ಕರ್ಮಿಗಳು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಡಿಎಸ್ಪಿ ಕೇಶಪ್ಪ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:Goa: ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದಲ್ಲೂ ಟೊಮ್ಯಾಟೋ ಚರ್ಚೆ

ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದು, ಘಟನೆ ಕುರಿತು ತನಿಖೆ ನಡೆಸಬೇಕಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಡಿಎಸ್‌ಪಿ ಕೇಶಪ್ಪ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಇದಕ್ಕೂ ಮುನ್ನ ಜುಲೈ ಮೊದಲ ವಾರದಲ್ಲಿ ಟೊಮೇಟೊ ಮಾರಾಟ ಮಾಡಿ 30 ಲಕ್ಷ ರೂಪಾಯಿ ಗಳಿಸಿದ್ದ 62 ವರ್ಷದ ವ್ಯಕ್ತಿಯೊಬ್ಬನನ್ನು ಹಣಕ್ಕಾಗಿ ದರೋಡೆಕೋರರು ಕೊಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next