Advertisement

ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ : ವಿಧೇಯಕ ಮಂಡನೆ

10:20 AM Jan 22, 2020 | Hari Prasad |

ಅಮರಾವತಿ: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಅಸ್ತಿತ್ವಕ್ಕೆ ತರುವುದಕ್ಕೆ ಸಂಬಂಧಿಸಿದ ವಿಧೇಯಕವನ್ನು ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಸರಕಾರ, ಅಲ್ಲಿನ ವಿಧಾನಸಭೆಯಲ್ಲಿ ಸೋಮವಾರ ಮಂಡಿಸಿದೆ. ಶಾಸಕಾಂಗದ ರಾಜಧಾನಿಯಾಗಿ ಅಮರಾವತಿ, ಕಾರ್ಯಾಂಗದ ರಾಜಧಾನಿಯಾಗಿ ವಿಶಾಖ ಪಟ್ಟಣಂ ಹಾಗೂ ನ್ಯಾಯಾಂಗದ ರಾಜಧಾನಿ ಯಾಗಿ ಕರ್ನೂಲನ್ನು ಆಯ್ಕೆ ಮಾಡಲಾಗಿದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

Advertisement

ಕಲಾಪದ ಹೊತ್ತಿನಲ್ಲೇ ವಿಧಾನಸಭೆಯ ಹೊರಗಡೆ ಜಮಾಯಿಸಿದ್ದ ಸಾವಿರಾರು ರೈತರು, ಮಹಿಳೆಯರು ಭದ್ರತೆ ಮೀರಿ ವಿಧಾನಸಭೆಗೆ ನುಗ್ಗಲು ಪ್ರಯತ್ನಿಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ ಅವರನ್ನು ಚದುರಿಸಿದ್ದಾರೆ. ಹಿಂಬದಿಯ ದ್ವಾರದ ಬಳಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಬೆಂಬಲಿಗರೊಂದಿಗೆ ಆಗಮಿಸಿ ವಿಧಾನಸಭೆ ಪ್ರವೇಶಿಸಲು ಯತ್ನಿಸಿದರೂ ಅದು ಕೈಗೂಡಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next