Advertisement

ಭರವಸೆ ಈಡೇರಿಸಲು ವಿಫಲ: ತನ್ನ ಕೆನ್ನೆಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಕಾರ್ಪೋರೇಟರ್

02:36 PM Aug 01, 2023 | Team Udayavani |

ಆಂಧ್ರಪ್ರದೇಶ: ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸದ ಕಾರಣಕ್ಕೆ ಅನಕಪಲ್ಲಿ ಜಿಲ್ಲೆಯ ಕೌನ್ಸಿಲರ್ ಸೋಮವಾರ ಸಭೆಯ ಮಧ್ಯದಲ್ಲಿ ಮಾತನಾಡುತ್ತಾ ತನ್ನ ಚಪ್ಪಲಿಯಿಂದ ತನ್ನ ಕೆನ್ನೆಗೆ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ.

Advertisement

ನರಸೀಪಟ್ಟಣ ಪುರಸಭೆಯ (ವಾರ್ಡ್ 20) ಕೌನ್ಸಿಲರ್ ಮುಲಪರ್ತಿ ರಾಮರಾಜು ಕೌನ್ಸಿಲ್ ಸಭೆಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಾನು ಕೌನ್ಸಿಲರ್ ಆಗಿ ಆಯ್ಕೆಯಾಗಿ 31 ತಿಂಗಳಾಗಿದೆ ಆದರೆ ನನ್ನ ವಾರ್ಡ್‌ನಲ್ಲಿನ ಒಳಚರಂಡಿ, ವಿದ್ಯುತ್, ನೈರ್ಮಲ್ಯ, ರಸ್ತೆ ಸೇರಿದಂತೆ ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ನನಗೆ ಸಾಧ್ಯವಾಗುತ್ತಿಲ್ಲ, ”ಎಂದು ರಾಮರಾಜು ಅಸಮಾಧಾನ ತೋಡಿಕೊಂಡಿದ್ದಾರೆ, ಅಧಿಕಾರಿಗಳು ಬೇರೆ ಎಲ್ಲ ವಾರ್ಡ್ ನ ಸಮಸ್ಯೆಗಳಿಗೆ ಗಮನ ಕೊಟ್ಟಿದ್ದಾರೆ ಕೇವಲ ನನ್ನ ವಾರ್ಡಿನ ಸಮಸ್ಯೆಗಳನ್ನು ಮಾತ್ರ ಈಡೇರಿಸಲಿಲ್ಲ, ಇದೆ ಬೇಸರದಲ್ಲಿದ್ದ ಕೌನ್ಸಿಲರ್ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ತನ್ನ ಅಳಲನ್ನು ತೋಡಿಕೊಂಡು ತನ್ನದೇ ಚಪ್ಪಲಿಯಿಂದ ಕೆನ್ನೆಗೆ ಹೊಡೆದುಕೊಂಡಿದ್ದಾರೆ.

ಆಟೋರಿಕ್ಷಾ ಓಡಿಸುವ ಮೂಲಕ ಜೀವನ ಸಾಗಿಸುತ್ತಿರುವ 40 ವರ್ಷ ವಯಸ್ಸಿನ ಕೌನ್ಸಿಲರ್ ಊರಿನ ಜನರ ಒಮ್ಮತದ ಮೇಲೆ ಕೌನ್ಸಿಲರ್ ಆಗಿ ನೇಮಕಗೊಂಡಿದ್ದರು ಆದರೆ ಕೌನ್ಸಿಲರ್ ಆಗಿ ನೇಮಕವಾದಾಗಿನಿಂದ ಇಂದಿನ ವರೆಗೆ ನನ್ನ ವಾರ್ಡಿನ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿಲ್ಲ ಎಂದು ಕೊರಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next