Advertisement

ತಿರುಪತಿಯಲ್ಲಿ ವ್ಯಕ್ತಿ ಆತ್ಮಹತ್ಯೆ: ಇತಿಹಾಸದಲ್ಲೇ ಇದೇ ಮೊದಲು

10:17 AM Dec 15, 2019 | Team Udayavani |

ತಿರುಮಲ: ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ.

Advertisement

ದೇಗುಲ ಬಳಿ ಶುಕ್ರವಾರ ನಸುಕಿನಲ್ಲಿ ತಮಿಳುನಾಡು ಮೂಲದ 40 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊದಲು ಇದನ್ನು ಸಹಜ ಸಾವು ಎನ್ನಲಾಗಿತ್ತು. ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಎಂಬುದು ದೃಢಪಟ್ಟಿದೆ. ಘಟನೆ ಬಳಿಕ ಈ ಸ್ಥಳದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಲಾಯಿತು. ಇದಕ್ಕಾಗಿ ದೇಗುಲಕ್ಕೆ ಹೋಗುವ ರಸ್ತೆಯನ್ನು ಬಂದ್‌ ಮಾಡಲಾಗಿತ್ತು. ದೇಗುಲದ ಇತಿಹಾಸದಲ್ಲೇ ಪ್ರಪ್ರಥಮ ಬಾರಿ ಇಂತಹ ಘಟನೆ ನಡೆದಿದ್ದು, ವಿಮೋಚನೆ ಸಿಗುತ್ತದೆ ಎಂಬ ಮೌಡ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪವಿತ್ರ ಕ್ಷೇತ್ರದಲ್ಲಿ ಬಲವಂತವಾಗಿ ಜೀವ ತ್ಯಜಿಸುವುದು ಅಪಶಕುನವಾಗುತ್ತದೆ. ಕ್ಷೇತ್ರದಲ್ಲಿ ಭಕ್ತರು ಇಂತಹ ಕೆಟ್ಟ ನಿರ್ಧಾರ ಕೈಗೊಳ್ಳಬೇಡಿ ಎಂದು ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next