Advertisement

ಆಂಧ್ರ ಸಚಿವ ಮೇಕಪಟಿ ಗೌತಮ್‌ ರೆಡ್ಡಿ ಹೃದಯಾಘಾತದಿಂದ ನಿಧನ

08:51 PM Feb 21, 2022 | Team Udayavani |

ಅಮರಾವತಿ: ಆಂಧ್ರಪ್ರದೇಶದ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಮೇಕಪಟಿ ಗೌತಮ್‌ ರೆಡ್ಡಿ (50) ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement

ದುಬೈನಲ್ಲಿ 10 ದಿನ ನಡೆದಿದ್ದ ಉದ್ದಿಮೆದಾರರ ಸಮಾವೇಶದಲ್ಲಿ ಭಾಗವಹಿಸಿ, ಮೂರು ದಿನಗಳ ಹಿಂದಷ್ಟೇ ಹೈದರಾಬಾದ್‌ಗೆ ಮರಳಿದ್ದರು. ಅವರುಭಾಗವಹಿಸಿ, ಅಂತಾರಾಷ್ಟ್ರೀಯ ಉದ್ದಿಮೆದಾರರು ಆಂಧ್ರದಲ್ಲಿ ಹೂಡಿಕೆ ಮಾಡಲು ಉತ್ತೇಜನ ನೀಡಿದ್ದರು.

ಗೌತಮ್‌ ಅವರು ಸೋಮವಾರ ಮನೆಯಲ್ಲೇ ಕುಸಿದುಬಿದ್ದಿದ್ದರು. ತಕ್ಷಣವೇ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫ‌ಲಕಾರಿಯಾಗದೆ, ಅವರು ಕೊನೆಯುಸಿರೆಳೆದರು ಎಂದು ವೈದ್ಯರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next