Advertisement

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

09:18 PM Apr 23, 2024 | Team Udayavani |

ಬಿಷ್ಕೆಕ್‌: ಮಧ್ಯ ಏಷ್ಯಾದ ಕಿರ್ಗಿಸ್ತಾನದಲ್ಲಿ ಭಾರತ ಮೂಲದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಮೃತನನ್ನು ಆಂಧ್ರಪ್ರದೇಶದ ಅನಕಾಪಲ್ಲಿಯ ದಾಸರಿ ಚಂದು (21) ಎಂದು ಗುರ್ತಿಸಲಾಗಿದ್ದು, ಈತ ಕಿರ್ಗಿಸ್ತಾನದಲ್ಲಿ ಎಂಬಿಬಿಎಸ್‌ ಅಧ್ಯಯನ ಮಾಡುತ್ತಿದ್ದ ಎನ್ನಲಾಗಿದೆ.

Advertisement

ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಆಂಧ್ರಪ್ರದೇಶದವರೇ ಆದ ತನ್ನ ಇತರ 4 ಗೆಳೆಯರೊಂದಿಗೆ ಪ್ರವಾಸಕ್ಕೆಂದು ಜಲಪಾತಕ್ಕೆ ತೆರಳಿದ್ದ ವೇಳೆ ಈ ದುರ್ಘ‌ಟನೆ ನಡೆದಿದೆ.

ಪಾರ್ಥೀವ ಶರೀರವನ್ನು ಅನಕಾಪಲ್ಲಿಗೆ ಕರೆತರಲು ನೆರವು ನೀಡುವಂತೆ ಮೃತನ ಕುಟುಂಬಸ್ಥರು ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next