Advertisement

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

10:43 PM May 15, 2021 | Team Udayavani |

ಗಂಗಾವತಿ: ತಾಲೂಕಿನ ಆನೆಗೊಂದಿಯಲ್ಲಿ ವ್ಯಕ್ತಿಯೊರ್ವನ ಸಾವಿನಿಂದ ರೊಚ್ಚಿಗೆದ್ದ ಸಂಬಂಧಿಕರು ಹಾಗೂ ಆಪ್ತರು ಆಸ್ಪತ್ರೆಯ ಮುಂಭಾಗಕ್ಕೆ ಆಗಮಿಸಿ ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಜತೆ ವಾಗ್ವಾದ ನಡೆಸಿ ನೂಕಾಟ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಡಾ.ರವಿಕುಮಾರ್ ರಾಠೋಡ್ ಪ್ರಕರಣ ದಾಖಲಿಸಿದ್ದಾರೆ.

Advertisement

ಕರ್ತವ್ಯ ನಿರತ ಅಧಿಕಾರಿಗಳನ್ನು ಅಡ್ಡಿಪಡಿಸಿದ್ದು ಜಾತಿ‌ ನಿಂದನೆ ಮಾಡಿದ್ದು ಹಾಗೂ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ಜನರು ಗುಂಪುಗೂಡಿ ಗಲಾಟೆ ಮಾಡಿದ್ದರ ಕುರಿತು ಕೇಸ್ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಮಲ, ಶ್ರೀನಿವಾಸಶೆಟ್ಟಿ, ಶಿವು ಮಡ್ಡೇರ್,ರಾಘು ಮಡ್ಡೇರ್ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ : ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

Advertisement

Udayavani is now on Telegram. Click here to join our channel and stay updated with the latest news.

Next