Advertisement

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

01:07 AM Apr 28, 2024 | Team Udayavani |

ತೆಕ್ಕಟ್ಟೆ: ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿ ಮತ್ತು ಸಹಸ್ರನಾಳಿಕೇರ ಗಣಪತಿ ಯಾಗವು ಎ. 27ರಂದು ಸಂಭ್ರಮದಿಂದ ಜರಗಿತು.

Advertisement

ಶೈಕ್ಷಣಿಕ ರಜಾ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದಲೂ ಪ್ರವಾಸಿಗರ ದಂಡು ದೇಗುಲಗಳಿಗೆ ಭೇಟಿ ನೀಡುತ್ತಿರುವ ಪರಿಣಾಮ ಮುಂಜಾನೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂತು. ದಕ್ಷಿಣ ಕನ್ನಡ ಜಿಲ್ಲೆಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ, ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ಗಣಪತಿ ದೇವಸ್ಥಾನಕ್ಕೆ ಭಾರೀ ಸಂಖ್ಯೆ ಭಕ್ತರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ವಿಶೇಷ ಪಾನಕ ವಿತರಣೆ
ಬಿಸಿಲ ಬೇಗೆಯಿಂದಾಗಿ ಭಕ್ತರಿಗೆ ವಿಶೇಷ ಪಾನಕದ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ. ರವಿವಾರ ರಜಾದಿನವಾಗಿದ್ದರಿಂದ ಕರಾ ವಳಿಯ ಇತರ ದೇಗುಲಗಳಲ್ಲಿಯೂ ಭಕ್ತರ ಸಂಖ್ಯೆ ಸಾಮಾನ್ಯಕ್ಕಿಂತ ಹೆಚ್ಚಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next