Advertisement

ಆನೆಗುಡ್ಡೆ : ಸಂಭ್ರಮದ ಶ್ರೀ ವಿನಾಯಕ ಚತುರ್ಥಿ ; ಹರಿದು ಬಂದ ಭಕ್ತ ಸಮೂಹ

07:51 PM Sep 10, 2021 | Team Udayavani |

ತೆಕ್ಕಟ್ಟೆ : ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಹಾಗೂ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗ ವಿಶೇಷ ಪೂಜೆಯೊಂದಿಗೆ ಸೆ.10 ಶುಕ್ರವಾರದಂದು ಸಂಭ್ರಮದಿಂದ ಜರುಗಿತು .

Advertisement

ಶ್ರೀ ದೇವಳ ಸಂಪೂರ್ಣ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದು ಈ ಸಂದರ್ಭದಲ್ಲಿ ನಂಬಿದ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಯಲ್ಲಿ ನೆರೆದಿದ್ದರು.

ಹರಿದು ಬಂದ ಭಕ್ತ ಸಮೂಹ : ಕೋವಿಡ್‌ ಆತಂಕದ ನಡುವೆಯೂ ಕೂಡಾ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಿನಾಯಕ ಚತುರ್ಥಿ ಯಂದು ಸಹಸ್ರಾರು ಭಕ್ತರು ಮುಂಜಾನೆಯಿಂದ ಶ್ರೀ ದೇವರ ದರ್ಶನ ಪಡೆದು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್‌ ನಟೇಶ್‌ ಕಾರಂತ್‌ ತೆಕ್ಕಟ್ಟೆ ಹಾಗೂ ಸಿಬ್ಬಂದಿ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಚಿತ್ರಗಳು : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ .

Advertisement

Udayavani is now on Telegram. Click here to join our channel and stay updated with the latest news.

Next