Advertisement

ಆನೆಗುಡ್ಡೆ: ರೂ.12ಲಕ್ಷ ಮೌಲ್ಯದ ಅಗತ್ಯ ವಸ್ತುಗಳ ಕಿಟ್‌ ಜಿಲ್ಲಾಡಳಿತಕ್ಕೆ ಹಸ್ತಾಂತರ

06:04 PM May 03, 2020 | sudhir |

ತೆಕ್ಕಟ್ಟೆ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ ಸುಮಾರು ರೂ.12 ಲಕ್ಷಕ್ಕೂ ಅಧಿಕ ಮೌಲ್ಯದ 1250 ಅಗತ್ಯ ವಸ್ತುಗಳ ಕಿಟ್‌ ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವ ಕಾರ್ಯಕ್ರಮವನ್ನು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೇ.3 ರಂದು ದೇಗುಲದಲ್ಲಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್‌ ಮಾತನಾಡಿದರು ಹಾಗೂ ಯೂನಿಯನ್‌ನ ಸದಸ್ಯರಿಗೆ ಕಿಟ್‌ಗಳನ್ನು ಕುಂದಾಪುರದ ಉಪ ವಿಭಾಗಾಧಿಕಾರಿ ರಾಜು ಕೆ. ಅವರು ಹಸ್ತಾಂತರಿಸಿದರು.

Advertisement

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಮಾತನಾಡಿ, ಕಾರ್ಯಕ್ರಮದಲ್ಲಿ ಕುಂಭಾಸಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀವಾಣಿ ಅಡಿಗ, ಜಿಲ್ಲಾ ಟ್ಯಾಕ್ಸಿಮನ್‌ ಹಾಗೂ ಮ್ಯಾಕ್ಸಿಕ್ಯಾಬ್‌ನ ಯೂನಿಯನ್‌ ಇದರ ಕಾರ್ಯದರ್ಶಿ ರಮೇಶ್‌ ಕೋಟ್ಯಾನ್‌ , ದೇಗುಲದ ಮೆನೇಜರ್‌ ನಟೇಶ್‌ ಕಾರಂತ್‌ ತೆಕ್ಕಟ್ಟೆ, ಪರ್ಯಾಯ ಅರ್ಚಕ ಚಂದ್ರಕಾಂತ್‌ ಉಪಾಧ್ಯಾಯ, ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್‌ ಅಂಕದ ಕಟ್ಟೆ , ಜಿಲ್ಲಾ ಟ್ಯಾಕ್ಸಿಮನ್‌ ಹಾಗೂ ಮ್ಯಾಕ್ಸಿಕ್ಯಾಬ್‌ನ ಯೂನಿಯನ್‌ನ ಸದಸ್ಯರು ಹಾಗೂ ದೇವಳದ ಸಿಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next