Advertisement

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

09:15 AM Sep 19, 2017 | Team Udayavani |

ಬೆಂಗಳೂರು: ಸರಕಾರದ ಮಹತ್ವಾಕಾಂಕ್ಷಿ ‘ಮಾತೃಪೂರ್ಣ’ ಯೋಜನೆ ಅನುಷ್ಠಾನದ ಕ್ರಮ ಖಂಡಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾ ಮಂಡಳಿ ಸೆಪ್ಟಂಬರ್‌ 22ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

Advertisement

ಸರಕಾರ ರೂಪಿಸಿರುವ ಯೋಜನೆ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅದನ್ನು ಅನುಷ್ಠಾನ ಗೊಳಿಸುತ್ತಿರುವ ಕ್ರಮ ಅವೈಜ್ಞಾನಿಕವಾಗಿದೆ. ಈ ಸಂಬಂಧ ಸರಕಾರಕ್ಕೆ ಮನದಟ್ಟು ಮಾಡಿದ್ದರೂ ಪ್ರಯೋಜನವಾಗಿಲ್ಲ. ಬದಲಿಗೆ ಅಕ್ಟೋಬರ್‌ 2ರಂದು ಜಾರಿಗೊಳಿಸಲು ಸರಕಾರ ಹಠಕ್ಕೆ ಬಿದ್ದಿದೆ. ಆದ್ದರಿಂದ ಇದನ್ನು ಖಂಡಿಸಿ 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಹಾಮಂಡಳಿ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್‌. ಶಿವಶಂಕರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next