Advertisement

ಜಿಲ್ಲಾದ್ಯಂತ ಆರಂಭಗೊಂಡ ಅಂಗನವಾಡಿ

06:35 PM Nov 09, 2021 | Team Udayavani |

ಬಾಗಲಕೋಟೆ: ಸರಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು, ತಾಲೂಕಿನ ಮುರನಾಳ ಆರ್‌.ಸಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿಪಂ ಸಿಇಒ ಟಿ.ಭೂಬಾಲನ್‌ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.

Advertisement

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ಬಳಿಕ ಅಂಗನವಾಡಿ ಶಾಲೆಗಳು ಸೋಮವಾರದಿಂದ ಪುನಃ ಆರಂಭಗೊಂಡಿದ್ದು, ಅಂಗನವಾಡಿ ಸಿಬ್ಬಂದಿ ಶಾಲೆಗೆ ಆಗಮಿಸಿದ ಮಕ್ಕಳ ಮೇಲೆ ಪುಷ್ಪವೃಷ್ಟಿಗೈದು ಅದ್ಧೂರಿಯಿಂದ ಬರಮಾಡಿಕೊಳ್ಳಲಾಯಿತು. ಶಾಲೆಗೆ ಆಗಮಿಸಿದ ಮಕ್ಕಳಿಗೆ ಜಿಪಂ ಸಿಇಒ ಹೂ ನೀಡುವುದರ ಜತೆಗೆ ಪೆನ್ಸಿಲ್‌ ಕೂಡಾ ವಿತರಿಸಿದರು. ಸಮವಸ್ತ್ರದೊಂದಿಗೆ ಮಕ್ಕಳ ಖುಷಿಯಿಂದ ಶಾಲೆಗೆ ಆಗಮಿಸಿದ್ದರು.

ನಂತರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಟಿ.ಭೂಬಾಲನ್‌, ಆರಂಭಿಕ ಹಂತದಲ್ಲಿ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಅಗತ್ಯವಾಗಿದ್ದು, ಸರಕಾರ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಾಧ್ಯವಾಗುತ್ತದೆ.

ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸರಕಾರ ಒದಗಿಸಿದ ಆಹಾರಧಾನ್ಯ ವಿತರಣೆಯಲ್ಲಿ ಯಾವುದೇ ವ್ಯತ್ಯಾಸವಾಗಬಾರದು ಎಂದು ತಿಳಿಸಿದರು. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪಾಲನೆಯಾಗಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ನಿಗಾ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ
ಶೇಂಗಾ ಉಂಡೆ ಮತ್ತು ಬೇಯಿಸಿದ ತತ್ತಿಯನ್ನು ನೀಡಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ, ಮಕ್ಕಳ ಮತ್ತು ತಾಯಂದಿರ ಮರಣ ಕಡಿಮೆಗೊಳಿಸುವುದು, ವಿವಿಧ ಇಲಾಖೆಯ ಸಹಕಾರದಿಂದ ಅಂಗನವಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದರು. ಆರೋಗ್ಯ ತಪಾಸಣೆ, ಪೌಷ್ಟಿಕ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸರಕಾರ ಯೋಜನೆಗಳು ಯಶಸ್ವಿಗೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

Advertisement

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪನಾಧಿಕಾರಿ ರಮೇಶ ಸೂಳಿಕೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ಪಿಡಿಒ ಮಹಾಂತೇಶ ನಾಲತ್ವಾಡ ಉಪಸ್ಥಿತರಿದ್ದರು .

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next