Advertisement

ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಆಗ್ರಹ

10:52 AM Jul 14, 2020 | Suhan S |

ಹಾಸನ: ಅಂಗನವಾಡಿ ಕೇಂದ್ರಗಳು, ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುರಕ್ಷತೆ ಒದಗಿಸಬೇಕು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಹೆಚ್ಚವರಿ ವೇತನ ಹಾಗೂ 50 ಲಕ್ಷ ರೂ.ವಿಮೆ ಕಲ್ಪಿಸಬೇಕು ಎಂದು ರ್ನಾಟಕ ರಾಜ್ಯ ಅಂಗನವಾಡಿ ನೌಕರರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, ಕೋವಿಡ್ ನಿಯಂತ್ರಣಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು ಅಪಾರವಾಗಿ ಶ್ರಮಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗುಣಮಟ್ಟದ ಸ್ಯಾನಿಟೈಸರ್‌, ಮಾಸ್ಕ್, ಪಿಪಿಇ ಕಿಟ್‌ಗಳನ್ನು, ಗ್ಲೌಸ್‌ಗಳನ್ನು ಕೊಡದ ಕಾರಣ ಬೆಳಗಾವಿಯಲ್ಲಿ ಇಬ್ಬರು ಮತ್ತು ಕುಣಿಗಲ್‌ ನಲ್ಲಿ ಒಬ್ಬರು ಮತ್ತು ನರಗುಂದ ತಾಲೂಕಿನ ಕಾರ್ಯಕರ್ತೆ ಮತ್ತು ಅವರ ಮಗುವಿಗೆ ಸೋಂಕು ತಗುಲಿದೆ. ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ರೀತಿಯ ಸಂರಕ್ಷಣೆಯಿಲ್ಲದೇ ಆತಂಕದಲ್ಲಿಯೇ ಕೆಲಸ ಮಾಡುವಂತಾಗಿದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿದರು.

ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ನಿವೃತ್ತಿ ವೇತನ ಕೊಡಬೇಕು. ಮತ್ತು ಈಗಿರುವ ನಿವೃತ್ತಿ ವೇತನದ ಪದ್ಧತಿಯನ್ನು ಬದಲಾಯಿಸಬೇಕು. ಮೇಲ್ವಿಚಾರಕಿಯರ ಹುದ್ದೆಗೆ ಶೇ.75ರ ಮಿತಿಯನ್ನು ಶೇ.100ಕ್ಕೆ ವಿಸ್ತರಿಸಬೇಕು ಎಂದೂ ಮನವಿ ಮಾಡಿದರು. ಸಿಐಟಿಯು ಮುಖಂಡ ಧರ್ಮೇಶ್‌, ಅಂಗನವಾಡಿ ನೌಕರರ ಸಂಘದ ಎಂ.ಬಿ. ಪುಷ್ಪ, ಅರವಿಂದ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next