Advertisement

ಅಂಗನವಾಡಿ ಕಾರ್ಯಕರ್ತೆಯರ ಜೊತೆ ನಾಳೆ ಸಿಎಂ ಸಭೆ

03:45 AM Apr 09, 2017 | Harsha Rao |

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರ ಸಭೆಯು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಬೇಡಿಕೆ ಈಡೇರಿದ್ದರೆ ಏ.11ರಿಂದ ಮತ್ತೆ ಹೋರಾಟ ಆರಂಭಿಸಲು, ರಾಜ್ಯ ಅಂಗನವಾಡಿ ನೌಕರರ ಸಂಘ ತೀರ್ಮಾನಿಸಿದೆ.

Advertisement

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಸಭೆ ಕರೆಯಲಾಗಿದ್ದು, ಸಂಘಟನೆಗಳ ಮುಖಂಡರು ಸೇರಿದಂತೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳಿಗೆ ಈಗಾಗಲೇ ಮುಖ್ಯಮಂತ್ರಿಯವರ ಕಚೇರಿಯಿಂದ ಸಭಾ ಸೂಚನಾ ಪತ್ರ ರವಾನಿಸಲಾಗಿದೆ. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು), ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌, ಕರ್ನಾಟಕ ರಾಜ್ಯ ಅಂಗನವಾಡಿ
ಕಾರ್ಯಕರ್ತೆಯರ ಮಹಾಮಂಡಳ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ
ಕ್ಷೇಮಾಭಿವೃದ್ಧಿ ಸಮಿತಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಸೇರಿ ಒಟ್ಟು 6 ಸಂಘಟನೆಗಳಿಗೆ ಸಭಾ ಸೂಚನಾ ಪತ್ರ ಕಳಿಸಲಾಗಿದ್ದು, ಪ್ರತಿ ಸಂಘಟನೆಯಿಂದ ತಲಾ 3 ಮಂದಿ ಪ್ರತಿನಿಧಿಗಳು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ ಕನಿಷ್ಟ 10 ಸಾವಿರ ರೂ. ಮತ್ತು ಅಂಗನವಾಡಿ ಸಹಾಯಕಿಯರ ಮಾಸಿಕ ಗೌರವಧನ 7 ಸಾವಿರ ರೂ. ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾ.20ರಿಂದ 23ರವರೆಗೆ ಬೆಂಗಳೂರಿನ μÅàಡಂ ಪಾರ್ಕ್‌ ಬಳಿ ಅಂಗನವಾಡಿ ನೌಕರರು ಅಹೋರಾತ್ರಿ ಧರಣಿ
ನಡೆಸಿದ್ದರು. ಬೇಡಿಕೆಗೆ ಸಂಬಂಧಿಸಿದಂತೆ ಏ.19ರಂದು ಸಭೆ ಕರೆಯುವುದಾಗಿ ಮುಖ್ಯಮಂತ್ರಿಯವರು ಭರವಸೆ ಕೊಟ್ಟಿದ್ದರು. ಆದರೆ, ಅಂಗನವಾಡಿ ನೌಕರರ ಸಂಘಟನೆಗಳು ಇದಕ್ಕೆ ಒಪ್ಪದಿದ್ದ ಕಾರಣಕ್ಕೆ ಸಭೆಯನ್ನು ಏ.10ಕ್ಕೆ ನಿಗದಿಪಡಿಸಲಾಗಿತ್ತು. ಅದರಂತೆ ಸೋಮವಾರ ಸಭೆ ನಡೆಯಲಿದೆ. 

Advertisement

Udayavani is now on Telegram. Click here to join our channel and stay updated with the latest news.

Next