Advertisement

ಉಪ ಚುನಾವಣೆ ಬಳಿಕ ರಾಜಕೀಯದಲ್ಲಿ ತಲ್ಲಣ

11:14 PM Nov 12, 2019 | Team Udayavani |

ಬೆಳಗಾವಿ: ಉಪಚುನಾವಣೆ ನಂತರ ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ಮತ್ತೆ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು ಆಗ ಕೆಲ ಶಾಸಕರು ಪಕ್ಷ ಬದಲಾಯಿಸಲಿದ್ದಾರೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಉಪಚುನಾವಣೆ ಬಳಿಕ ಪಕ್ಷಾಂತರಿ ಶಾಸಕರಿಗೆ ಬಹಳ ಬೇಡಿಕೆ ಬರಲಿದೆ.

Advertisement

ಈ ನಿಟ್ಟಿನಲ್ಲಿ ರಾಜಕೀಯ ಚಟುವಟಿಕೆ ಹಾಗೂ ಚರ್ಚೆಗಳು ಸಹ ನಡೆದಿವೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹತ್ತು ಹಾಗೂ ಜೆಡಿಎಸ್‌ ಎರಡರಲ್ಲಿ ಜಯ ಗಳಿಸಲಿವೆ. ಈ ಫಲಿತಾಂಶ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲು ಕಾರಣವಾಗಲಿದೆ. ಫಲಿತಾಂಶ ನೋಡಿಕೊಂಡು ಒಂದಿಷ್ಟು ಶಾಸಕರು ಪಕ್ಷ ಬದಲಾಯಿಸಲು ಚಿಂತನೆ ನಡೆಸಿದ್ದಾರೆ ಎಂದರು.

ಯಾವುದೇ ಕಾರಣಕ್ಕೂ ಗೋಕಾಕ ಕ್ಷೇತ್ರದಿಂದ ಸ್ಪರ್ಧೆಮಾಡುವುದಿಲ್ಲ. ಯಮಕನಮರಡಿ ಕ್ಷೇತ್ರ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಕಳೆದ ಚುನಾವಣೆಯಲ್ಲಿ ನಾನು ಯಾವುದೇ ಪ್ರಚಾರ ಮಾಡದೇ ಇದ್ದರೂ ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ಹೀಗಿರುವಾಗ ಯಮಕನಮರಡಿ ಕ್ಷೇತ್ರ ತೊರೆಯುವ ಆಲೋಚನೆಯನ್ನೂ ಮಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next